Asianet Suvarna News Asianet Suvarna News

ಬಿಜೆಪಿ ನಾಯಕನಿಗೆ ಕೊರೋನಾ, ಬಿಗ್‌ಬ್ಯಾಶ್ ಆಡ್ತಾರಾ ರೈನಾ? ಅ.24ರ ಟಾಪ್ 10 ಸುದ್ದಿ!

ಬಿಹಾರ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಕೊರೋನಾ ಶಾಕ್ ಎದುರಾಗಿದೆ. ಗಡಿಯಲ್ಲಿ ಚೀನಾ ಮತ್ತೆ ಕಿರಿಕ್ ಮುಂದುವರಿಸಿದೆ. ಬೆಂಗಳೂರಲ್ಲಿ ಸುರಿದ ಭಾರಿ ಮಳೆಯಿಂದ ಮನೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಪರಿಹಾರ ಘೋಷಿಸಲಾಗಿದೆ. ಚಿಲ್ಲರೆ ವ್ಯಾಪಾರಿಗಳು 2 ಟನ್‌ಗಿಂತ ಅಧಿಕ ಈರುಳ್ಳಿ ಇಡುವಂತಿಲ್ಲ ಎಂದು ಸೂಚಿಸಲಾಗಿದೆ. ಜೆಡಿಎಸ್‌ನ ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಬಿಗ್‌ಬ್ಯಾಶ್ ಲೀಗ್ ಆಡಲುು ಸಜ್ಜಾದ ಧೋನಿ, ರೈನಾ,  ಕರ್ನಾಟಕಕ್ಕೆ ಜಿಎಸ್‌ಟಿ ಸಾಲ ಸೇರಿದಂತೆ ಅಕ್ಟೋಬರ್ 24ರ ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

Bihar election to MS Dhoni Top 10 News of october 24 ckm
Author
Bengaluru, First Published Oct 24, 2020, 4:51 PM IST

ಬಿಹಾರ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್ ಶಾಕ್!...

Bihar election to MS Dhoni Top 10 News of october 24 ckm

ಒಂದೆಡೆ ಕೊರೋನಾ ಅಟ್ಟಹಾಸ ದೇಶಾದ್ಯಂತ ಜನರನ್ನು ಕಂಗೆಡಿಸಿದೆ. ಹೀಗಿರುವಾಗಲೇ ಬಿಹಾರ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಬಿಜೆಪಿ ಹಾಗೂ ನಿತೀಶ್ ಕುಮಾರ್ ಈ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ರೀತಿಯ ಯತ್ನ ನಡೆಸುತ್ತಿದೆ. ಹೀಗಿರುವಾಗಲೇ ಇತ್ತ ಯುಪಿಎ ಕೂಡಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ರೀತಿಯ ಕಸರತ್ತು ನಡೆಸುತ್ತಿದೆ. ಆದರೀಗ ಈ ಎಲ್ಲಾ ಪೈಪೋಟಿಯ ನಡುವೆ ಬಿಜೆಪಿಗೆ ಬಹುದೊಡ್ಡ ಆಘಾತಕಾರಿ ಸುದ್ದಿ ಬಂದೆರಗಿದೆ.

ಗಡಿಗೆ ಸನಿಹದಲ್ಲಿ ಚೀನಾದಿಂದ ಬೃಹತ್‌ ಕಟ್ಟಡಗಳ ನಿರ್ಮಾಣ!...

Bihar election to MS Dhoni Top 10 News of october 24 ckm

ಭಾರತದ ಜತೆಗೆ ಸಂಘರ್ಷದ ವಾತಾವರಣ ಮುಂದುವರಿದಿರುವಾಗಲೇ, ಚೀನಾ ಸೇನೆ ಅಕ್ಸಾಯ್‌ ಚಿನ್‌ ಪ್ರದೇಶದಲ್ಲಿ ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ)ಯಿಂದ ಕೇವಲ 10 ಕಿ.ಮೀ. ದೂರದಲ್ಲಿ 4 ಫುಟ್ಬಾಲ್‌ ಮೈದಾನದಷ್ಟುದೊಡ್ಡದಾದ ಪ್ರದೇಶದಲ್ಲಿ ಬೃಹತ್‌ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದೆ. 

ಕರ್ನಾಟಕ ಸೇರಿ 16 ರಾಜ್ಯಕ್ಕೆ 6000 ಕೋಟಿ ಜಿಎಸ್‌ಟಿ ಸಾಲ!...

Bihar election to MS Dhoni Top 10 News of october 24 ckm

ಕೊರೋನಾ ಸಂಕಷ್ಟದಿಂದಾಗಿ ಯೋಜಿತ ರೀತಿಯಲ್ಲಿ ಜಿಎಸ್‌ಟಿ ಸಂಗ್ರಹವಾಗದೆ ಸಮಸ್ಯೆ ಎದುರಿಸುತ್ತಿದ್ದ ಕರ್ನಾಟಕ ಸೇರಿದಂತೆ 16 ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ 6000 ಕೋಟಿ ರು. ಸಾಲದ ನೆರವು ಒದಗಿಸಿದೆ. ರಾಜ್ಯಗಳ ಹೆಸರಿನಲ್ಲಿ ಮಾರುಕಟ್ಟೆಯಿಂದ ಸಾಲ ಪಡೆದಿರುವ ಕೇಂದ್ರ ಸರ್ಕಾರ, ಆ ಹಣವನ್ನು ಇದೀಗ ರಾಜ್ಯಗಳಿಗೆ ವರ್ಗಾಯಿಸಿದೆ.

ಬಿಗ್‌ಬ್ಯಾಶ್‌ ಲೀಗ್‌ನಲ್ಲಿ ಆಡ್ತಾರಂತೆ ಧೋನಿ, ರೈನಾ?...

Bihar election to MS Dhoni Top 10 News of october 24 ckm

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಎಂ ಎಸ್ ಧೋನಿ, ಸುರೇಶ್ ರೈನಾ, ಯುವರಾಜ್ ಸಿಂಗ್ ಈ ಬಾರಿಯ ಬಿಗ್‌ಬ್ಯಾಶ್‌ ಲೀಗ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. 

ಎಲ್ಲೋದ್ರು ಬಿಗ್ ಬಾಸ್‌ ಶ್ರುತಿ ಪ್ರಕಾಶ್? ಈ ಫೋಟೋ ವೈರಲ್!...

Bihar election to MS Dhoni Top 10 News of october 24 ckm

ಬಿಗ್ ಬಾಸ್‌ ಸೀಸನ್‌ 5ರಲ್ಲಿ ಸಿಕ್ಕಾಪಟ್ಟೆ ಫೇಮಸ್‌ ಆದ ಗಾಯಕಿ ಕಮ್ ನಟಿ ಶ್ರುತಿ ಪ್ರಕಾಶ್‌ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ, ಅವರ ಕೈಯಲ್ಲಿ ಯಾವ ಸಿನಿಮಾಗಳಿವೆ?

ಟ್ಯಾಟೂ ಹಾಕಿಸ್ತಿದೀರಾ? ಆರೋಗ್ಯದ ಮೇಲೆ ಈ ದುಷ್ಪರಿಣಾಮ ಬೀರ್ಬಹುದು!...

Bihar election to MS Dhoni Top 10 News of october 24 ckm

ಟ್ಯಾಟೂ ಹಾಕಿಸ್ತಿದೀರಾ? ಹಾಕಿದ್ರೆ ಈ ಸುದ್ದಿನಾ ನೀವು ಓದಲೇ ಬೇಕು. ಟ್ಯಾಟೂ ಹಾಕಿಸಿದರೆ ಸ್ಟೈಲಿಶ್ ಆಗಿ ಕಾಣಿಸಬಹುದು. ಆದರೆ ಇದರಿಂದ ಅರೋಗ್ಯ ಸಮಸ್ಯೆಗಳು ಸಹ ಕಂಡು ಬರುತ್ತದೆ.ಟ್ಯಾಟೂ ನೈಸರ್ಗಿಕ ಬೆವರುವಿಕೆಯನ್ನು ದುರ್ಬಲಗೊಳಿಸಬಹುದು ಎಂದು ಯುಎಸ್ ನ ಟೆಕ್ಸಾಸ್ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಹಿಡಿದಿದ್ದಾರೆ, ಇದು ದೇಹದ ದೊಡ್ಡ ಪ್ರದೇಶವನ್ನು ಆವರಿಸಿದರೆ ದೇಹವು ಹೆಚ್ಚು ಬಿಸಿಯಾಗಲು ಕಾರಣವಾಗಬಹುದು. 

ಹೊಚ್ಚ ಹೊಸ BMW G310 R ಮತ್ತು BMW 310 GS ಬೈಕ್ ಬಿಡುಗಡೆ!...

Bihar election to MS Dhoni Top 10 News of october 24 ckm

ಸ್ಟೈಲೀಷ್ ಡಿಸೈನ್, ದಕ್ಷ ಎಂಜಿನ್ ಹೊಂದಿರುವ BMW G310 R ಮತ್ತು BMW 310 GS ಬೈಕ್ ಬಿಡುಗಡೆಯಾಗಿದೆ.  ಕೇವಲ 4500 ರೂಪಾಯಿ ಮಾಸಿಕ ಕಂತಿನಲ್ಲಿ ಹೊಚ್ಚ ಹೊಸ ಬೈಕ್ ನಿಮ್ಮದಾಗಿಸುವ ಅವಕಾಶವೂ ಇದೆ. 

ಚಿಲ್ಲರೆ ವ್ಯಾಪಾರಿಗಳು 2 ಟನ್‌ಗಿಂತ ಅಧಿಕ ಈರುಳ್ಳಿ ಇಡುವಂತಿಲ್ಲ!...

Bihar election to MS Dhoni Top 10 News of october 24 ckm

ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು ಹೊಂದುವ ಈರುಳ್ಳಿ ದಾಸ್ತಾನಿನ ಮೇಲೆ ಮಿತಿ ಹೇರಿದೆ.

ಡಿಕೆಶಿ ಭರ್ಜರಿ ಗಾಳ: ಜೆಡಿಎಸ್‌ನ ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರ್ಪಡೆ..!...

Bihar election to MS Dhoni Top 10 News of october 24 ckm

ಆರ್.ಆರ್.ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ವೇಳೆ ಪಕ್ಷಾಂತರ ಪರ್ವ ಜೋರಾಗಿದ್ದು, ಡಿಕೆಶಿ ಮೇಲಿಂದ ಮೇಲೆ ಜೆಡಿಎಸ್‌ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. 

ಬೆಂಗಳೂರು ಮಳೆ: ಮನೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ 25 ಸಾವಿರ ರೂ ಪರಿಹಾರ...

Bihar election to MS Dhoni Top 10 News of october 24 ckm

ಮಳೆಯಲ್ಲಿ ಮನೆಗಳನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೂ 25 ಸಾವಿರ ರೂ ಕೊಡಲು ತೀರ್ಮಾನಿಸಲಾಗಿದೆ. ಇವತ್ತು ನಾಳೆ ಮಳೆ ಬಿದ್ರೆ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಚರ್ಚಿಸಿದ್ದೇವೆ. ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದೇನೆ. ಇನ್ನು ಸಂಪೂರ್ಣವಾಗಿ ಮನೆ ಕಳೆದುಕೊಂಡವರ ಜಾಗ ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Follow Us:
Download App:
  • android
  • ios