ದ್ವಿಚಕ್ರ ವಾಹನದೊಂದಿಗೆ ಬಾವಿಗೆ ಬಿದ್ದ ಬೈಕ್ ಸವಾರ; ಸಾವು
ದ್ವಿಚಕ್ರ ವಾಹನದೊಂದಿಗೆ ಬೈಕ್ ಸವಾರನೊಬ್ಬ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಮಠ ಗಲ್ಲಿಯಲ್ಲಿ ನಡೆದ ಘಟನೆಯಲ್ಲಿ ತಾತ್ಯಾಸಾಬ ಪಾಟೀಲ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಬಾವಿಗೆ ಇಳಿದು ಮೃತ ದೇಹ ಹಾಗೂ ಬೈಕ್ ಹೊರತೆಗೆದಿದ್ದಾರೆ.ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವಿಚಕ್ರ ವಾಹನದೊಂದಿಗೆ ಬೈಕ್ ಸವಾರನೊಬ್ಬ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಮಠ ಗಲ್ಲಿಯಲ್ಲಿ ನಡೆದ ಘಟನೆಯಲ್ಲಿ ತಾತ್ಯಾಸಾಬ ಪಾಟೀಲ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಬಾವಿಗೆ ಇಳಿದು ಮೃತ ದೇಹ ಹಾಗೂ ಬೈಕ್ ಹೊರತೆಗೆದಿದ್ದಾರೆ.ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
"