ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮೂಡಬಿದರೆ ಬಳಿ ಮಿಜಾರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು (ಜ.03): ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮೂಡಬಿದರೆ ಬಳಿ ಮಿಜಾರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿದ್ದಾರೆ. ಆರೋಪಿಗಳಿದ್ದ ಕಾರಿನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ​​​ ಕಾರಿನ ಮೇಲೆ 2 ಸುತ್ತು ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಒಬ್ಬನ ಕಾಲಿಗೆ ಗುಂಡು ತಗುಲಿ ಗಾಯವಾಗಿದೆ.

ಕಾರಿನಲ್ಲಿದ್ದ ನಾಲ್ವರನ್ನು ಮೂಡಬಿದರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ಮಂಗಳೂರಿಗೆ ಕರೆ ತರುತ್ತಿದ್ದಾರೆ.