ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಇದೀಗ ಹೊಸ ಸಂಕಷ್ಟ ಎದುರಾಗಿದೆ. ಮುಖ್ಯಮಂಥ್ರಿ ವಿರುದ್ಧ ದೂರು ದಾಖಲಿಸಲಾಗಿದೆ. 

ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಪುಲ್ವಾಮಾ ಉಗ್ರರ ದಾಳಿ ಕುರಿತು ಮಾಹಿತಿ ಗೊತ್ತಿದ್ದರೂ ಉದ್ದೇಶ ಪೂರ್ವಕವಾಗಿ ಮುಚ್ಚಿಟ್ಟು ಸೈನಿಕರು ಬಲಿಯಾಗಲು ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ವಿರುದ್ಧ ವಿಧಾನಸೌಧ ಠಾಣೆಗೆ ಬಿಜೆಪಿ ಎಸ್‌ಸಿ ಮೋರ್ಚಾ ಶುಕ್ರವಾರ ದೂರು ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಫೆ. 14 ರಂದು ನಡೆದ ಭಯೋತ್ಪಾದಕರ ಆತ್ಮಾಹುತಿ ದಾಳಿಯಿಂದ 45 ವೀರಯೋ ಧರು ಸಾವನ್ನಪ್ಪಿದ್ದರು.

ಆದರೆ ಈ ಘಟನೆ ಬಗ್ಗೆ ಏ.5 ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅಸಂಬದ್ಧವಾಗಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ. ರಾಮು ಹೇಳಿದ್ದಾರೆ.