ಅರುಣಾಚಲ ಪ್ರದೇಶ ರಾಜಕೀಯಯದಲ್ಲಿ ಬದಲಾವಣೆ ಗಾಳಿ ಬೀಸಿದೆ. ಮುಖ್ಯಮಂತ್ರಿ ಪೇಮಾ ಖಂಡು 33 ಜನ ಶಾಸಕರೊಂದಿಗೆ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.   

ನವದೆಹಲಿ (ಡಿ. 31): ಅರುಣಾಚಲ ಪ್ರದೇಶ ರಾಜಕೀಯಯದಲ್ಲಿ ಬದಲಾವಣೆ ಗಾಳಿ ಬೀಸಿದೆ. ಮುಖ್ಯಮಂತ್ರಿ ಪೇಮಾ ಖಂಡು 33 ಜನ ಶಾಸಕರೊಂದಿಗೆ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.

Add Asianetnews Kannada as a Preferred SourcegooglePreferred

“ಅರುಣಾಚಲ ಪ್ರದೇಶದಲ್ಲಿ ಕಡೆಗೂ ಕಮಲ ಅರಳಿದೆ. ಹೊಸ ವರ್ಷದಲ್ಲಿ ಹೊಸ ಸರ್ಕಾರದಲ್ಲಿ ರಾಜ್ಯದ ಜನ ಅಭಿವೃದ್ಧಿಯನ್ನು ಕಾಣಲಿದ್ದಾರೆ" ಎಂದು ಖಂಡು ಹೇಳಿದ್ದಾರೆ.

ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಪೇಮಾ ಖಂಡು ಸೇರಿದಂತೆ 6 ಜನ ಶಾಸಕರನ್ನು ಪಿಪಿಎ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ಖಂಡು 33 ಮಂದಿ ಶಾಸಕರೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಅರುಣಾಚಲ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ 60 ಸ್ಥಾನಗಳನ್ನು ಗೆದ್ದು ಹೊಸ ಸರ್ಕಾರವನ್ನು ರಚಿಸಲಿದೆ. ಪೀಮಾ ಖಂಡು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ತಾಪಿರ್ ಗಾವ್ ಹೇಳಿದ್ದಾರೆ.