ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವೇ ಮಂಡನೆ| ಉಭಯ ಸದನದಲ್ಲಿ ಅಂಗೀಕಾರ: ಬಿಎಸ್‌ವೈ

ಬೆಂಗಳೂರು[ಜು.29]: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನು ಯಾವುದೇ ಬದಲಾವಣೆಯಿಲ್ಲದೆ ಮಂಡಿಸಿ ವಿಧಾನಮಂಡಲ ಉಭಯ ಸದನದಲ್ಲಿ ಅಂಗೀಕಾರ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಭಾನುವಾರ ನಗರದ ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸ ದವಳಗಿರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಸೋಮವಾರ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಮೈತ್ರಿ ಸರ್ಕಾರದ ಹಣಕಾಸು ವಿಧೇಯಕ ಮಂಡಿಸಲಿದ್ದೇನೆ. ಆದರೆ ವಿಧೇಯಕದಲ್ಲಿ ಒಂದಕ್ಷರವನ್ನೂ ಬದಲಿಸುವುದಿಲ್ಲ. ಈ ವಿಷಯವನ್ನು ಈಗಾಗಲೇ ವಿಧಾನಸಭಾಧ್ಯಕ್ಷರ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ, ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನು ಅಂಗೀಕರಿಸುವಂತೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ವೇಳೆ ಸದನದಲ್ಲಿ ಮನವಿ ಮಾಡಿದ್ದರು. ವಿಶ್ವಾಸಮತ ಸಾಧ್ಯವಾಗದೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಮೈತ್ರಿ ಸರ್ಕಾರದ ಹಣಕಾಸು ವಿಧೇಯಕ ಅಂಗೀಕಾರ ಕುರಿತಂತೆ ಅನುಮಾನ ವ್ಯಕ್ತವಾಗಿತ್ತು. ಆದರೆ ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನೇ ಅಂಗೀಕರಿಸಲು ನಿರ್ಧರಿಸಿರುವುದಾಗಿ ಸ್ಪಷ್ಟಪಡಿಸಿದರು.