ಚಿಕ್ಕಮಗಳೂರು: ದಲಿತ ಮಹಿಳೆ ಮೇಲೆ ಬಿಜೆಪಿ ಮುಖಂಡನಿಂದ ಅತ್ಯಾಚಾರ
ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರೇಂದ್ರ ಹೆಗ್ಗಡೆ ಕುಡಿತ ಮತ್ತಿನಲ್ಲಿ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.
ಶೃಂಗೇರಿ(ಜ.10): ದಲಿತ ಮಹಿಳೆಯ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಅತ್ಯಾಚಾರವೆಸಗಿದ ಪ್ರಕರಣ ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ವಿಧ್ಯಾರಣ್ಯಪುರ ಗ್ರಾಮ ಪಂಚಾಯತಿ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ವರ್ಷ ಡಿ31 ರಂದು ಬಿಜಿಪಿ ಕಾರ್ಯಕರ್ತ ,ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರೇಂದ್ರ ಹೆಗ್ಗಡೆ ಕುಡಿತ ಮತ್ತಿನಲ್ಲಿ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಶೃಂಗೇರಿ ಪೊಲೀಸರು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷನಿಗಾಗಿ ಶೋಧ ನಡೆಸಿದ್ದಾರೆ.