ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುಳಾ ನಾಗರಾಜು ಅವರ ಕಾರು ಅಪಘಾತಕ್ಕೆ ಈಡಾಗಿದೆ.
ತುಮಕೂರು : ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುಳಾ ನಾಗರಾಜು ಅವರ ಕಾರು ಅಪಘಾತಕ್ಕೆ ಈಡಾಗಿದೆ.
Add Asianetnews Kannada as a Preferred Source

ಗೋಡೆಕೆರೆಯಲ್ಲಿ ಪ್ರಚಾರ ಮುಗಿಸಿಕೊಂಡು ಚಿಕ್ಕನಾಯಕನಹಳ್ಳಿಗೆ ಬರುವಾಗ ಘಟನೆ ಸಂಭವಿಸಿದೆ. ಮಂಜುಳಾ ನಾಗರಾಜ್ ಕಾರಿಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಮಂಜುಳಾ ಕಾಲಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
