ದೆಹಲಿ ಬಿಜೆಪಿ ವಕ್ತಾರರೂ ಆಗಿರುವ ವಕೀಲ ಅಶ್ವಿನಿ ಕುಮಾರ್‌ ಉಪಾಧ್ಯಾಯ ಸಲ್ಲಿಸಿರುವ ಈ ಅರ್ಜಿ, ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ನವದೆಹಲಿ: 1ರಿಂದ 8ನೇ ತರಗತಿವರೆಗೆ ದೇಶಾದ್ಯಂತ ಹಿಂದಿ ಕಲಿಕೆ ಕಡ್ಡಾಯ ಮಾಡುವಂತೆ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇ​ಶಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ನಾಯಕರೊಬ್ಬರು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Add Asianetnews Kannada as a Preferred SourcegooglePreferred

ದೆಹಲಿ ಬಿಜೆಪಿ ವಕ್ತಾರರೂ ಆಗಿರುವ ವಕೀಲ ಅಶ್ವಿನಿ ಕುಮಾರ್‌ ಉಪಾಧ್ಯಾಯ ಸಲ್ಲಿಸಿರುವ ಈ ಅರ್ಜಿ, ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ದೇಶದಲ್ಲಿ ಐಕ್ಯತೆ ಹಾಗೂ ರಾಷ್ಟ್ರೀಯ ತೆæ ಪ್ರೋತ್ಸಾಹಿಸಲು ಹಿಂದಿ ಕಲಿಕೆ ಅತ್ಯಗತ್ಯ. ಕರ್ನಾಟಕ, ತಮಿಳುನಾಡಿನಂತಹ ಹಿಂದಿಯೇತರ ರಾಜ್ಯಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1968ರಲ್ಲಿ ರಾಜ್ಯಗಳ ಜತೆ ಸಮಾಲೋಚಿಸಿ ತ್ರಿಭಾಷಾ ಸೂತ್ರ ನೀತಿ ಜಾರಿಗೊಳಿಸಿತ್ತು. ಅದರ ಪ್ರಕಾರ, ಹಿಂದಿ ಭಾಷಿಕ ರಾಜ್ಯಗಳಲ್ಲಿ ಹಿಂದಿ, ಇಂಗ್ಲಿಷ್‌ ಹಾಗೂ ಆಧುನಿಕ ಭಾರತೀಯ ಭಾಷೆ ಕಲಿಸಬೇಕಿತ್ತು. ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ, ಇಂಗ್ಲಿಷ್‌ ಹಾಗೂ ಒಂದು ಪ್ರಾದೇಶಿಕ ಭಾಷೆ ಬೋಧಿಸಬೇಕಿತ್ತು. ಆದರೆ ಆ ನೀತಿ ಇನ್ನೂ ಜಾರಿಯಾಗಿಲ್ಲ ಎಂದು ದೂರಿದ್ದಾರೆ.