ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಶಾಸಕ-ಸಂಸದ ನಡುವೆ ಜಟಾಪಟಿ| ಪರಸ್ಪರ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಕಮಲ ನಾಯಕರು| ರಸ್ತೆ ನಿರ್ಮಾಣದ ನಾಮಫಲಕದಲ್ಲಿ ಹೆಸರಿಲ್ಲದ ಕಾರಣಕ್ಕೆ ಜಗಳ| ಉತ್ತರಪ್ರದೇಶದ ಬಿಜೆಪಿ ಸಂಸದ ಶರದ್ ತ್ರಿಪಾಠಿ, ರಾಕೇಶ್​​ ಭಾಘೇಲ್ ನಡುವೆ ಹೊಡೆದಾಟ|

ಲಕ್ನೋ(ಮಾ.06): ಶಿಲಾನ್ಯಾಸ ಕಾರ್ಯಕ್ರಮದಲ್ಲಿ ತಮ್ಮ ಹೆಸರಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಿಜೆಪಿಯ ಶಾಸಕ ಮತ್ತು ಸಂಸದ ಪರಸ್ಪರ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಸಂತ ಕಬೀರ್ ನಗರದ ರಸ್ತೆಯೊಂದರ ನಿರ್ಮಾಣಕ್ಕೆ ಸಂಬಂಧಿಸಿದಂತೆ, ನಾಮಫಲಕದಲ್ಲಿ ತಮ್ಮ ಹೆಸರಿಲ್ಲ ಎನ್ನುವ ಕಾರಣದಿಂದ ಆಕ್ರೋಶಗೊಂಡ ಬಿಜೆಪಿ ಸಂಸದ ಶರದ್ ತ್ರಿಪಾಠಿ ತಮ್ಮದೇ ಪಕ್ಷದ ಶಾಸಕರಾದ ರಾಕೇಶ್​​ ಭಾಘೇಲ್ ಮೇಲೆ ಹಲ್ಲೆ ಮಾಡಿದ್ದಾರೆ.

Scroll to load tweet…

ಇಬ್ಬರೂ ನಾಯಕರ ನಡುವೆ ಮಾತಿಗೆ ಮಾತು ಬೆಳೆದು ಈ ವೇಳೆ ಸಂಸದ ತ್ರಿಪಾಠಿ ತಮ್ಮ ಬೂಟಿನಿಂದ ಶಾಸಕರನ್ನು ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಶಾಸಕ ರಾಕೇಶ್ ಕೂಡ ಸಂಸದರಿಗೆ ಥಳಿಸಿದ್ದಾರೆ.

Scroll to load tweet…

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಾಡಾಗಿದ್ದ ಸಭೆಯಲ್ಲೇ ಈ ಕಿತ್ತಾಟ ನಡೆದಿದ್ದು, ಸಭೆಯಲ್ಲಿ ಹಲವಾರು ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ಸದ್ಯ ಶಾಸಕ-ಸಂಸದರ ನಡುವಿನ ಜಟಾಪಟಿ ಬಿಜೆಪಿಗೆ ಭಾರೀ ಮುಜುಗರ ತಂದಿಟ್ಟಿದೆ.