ಯಡಿಯೂರಪ್ಪ ನಾಳೆ ವಿಶ್ವಾಸಮತ ಯಾಚನೆ ವಿಚಾರ| ಬಿಜೆಪಿಯವರೇ ಯಡಿಯೂರಪ್ಪ ವಿರುದ್ದ ಮತ ಹಾಕಬಹುದು| ಈ ಬಗ್ಗೆ ನನಗೆ ಮಾಹಿತಿತೂ ಇಲ್ಲ ನಿರೀಕ್ಷೆಯೂ ಇಲ್ಲ| ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

ಮೈಸೂರು[ಜು.28]: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಹೈಡ್ರಾಮಾ ಕೊನೆಯ ಹಂತಕ್ಕೆ ತಲುಪಿದ್ದು, ನಾಳೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ. ಸದ್ಯ ಈ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿಯವರೇ ಯಡಿಯೂರಪ್ಪ ವಿರುದ್ದ ಮತ ಹಾಕಬಹುದು ಎಂದು ಬಾಂಬ್ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಮಗ ರಾಕೇಶ್ ಮೂರನೇ ವರ್ಷದ ಪುಣ್ಯ ತಿಥಿಗೆ ಮೈಸೂರಿಗೆ ತೆರಳಿರುವ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಡಿಯೂರಪ್ಪ ವಿಶ್ವಾಸಮತ ಯಾಚನೆ ಕುರಿತಾಗಿ ಪ್ರತಿಕ್ರಿಯಿಸಿಸುತ್ತಾ ' ಬಿಜೆಪಿಯವರೇ ಯಡಿಯೂರಪ್ಪ ವಿರುದ್ದ ಮತ ಹಾಕಬಹುದು. ಈ ಬಗ್ಗೆ ನನಗೆ ಮಾಹಿತಿಯೂ ಇಲ್ಲ, ನಿರೀಕ್ಷೆಯೂ ಇಲ್ಲ. 221 ರಲ್ಲಿ 111 ಸ್ಥಾನ ಬಿಜೆಪಿಗೆ ಎಲ್ಲಿ ಇದೆ? ನೀವು ಅವರಿಗೆ ಕೇಳಬೇಕು. ' ಎನ್ನುವ ಮೂಲಕ ಬಾಂಬ್ ಸಿಡಿಸಿದ್ದಾರೆ.

ಅತೃಪ್ತರ ಕರೆ ವಿಚಾರವಾಗಿ ಸ್ಪಷ್ಟನೆ ನಿಡಿರುವ ಸಿದ್ದರಾಮಯ್ಯ 'ಅತೃಪ್ತ ನಾಯಕರು ಕರೆ ಮಾಡಿದ್ದರು ಅಂತಾ ಹೇಳಿದ್ದೇನೆ, ಪದೇ ಪದೇ ಆ ವಿಚಾರ ಪ್ರಸ್ತಾಪ ಬೇಡ. ಕರೆ ಮಾಡಿಲ್ಲ ಅಂತಾ ಹೇಳಿರುವವರು ನನಗೆ ಕರೆ ಮಾಡಿಲ್ಲ' ಎಂದಿದ್ದಾರೆ.