ಕೇಂದ್ರದ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣಕ್ಕೆ ಇಳಿ ದಿದೆ ಎಂಬ ನಿಲುವಿಗೆ ಬಂದಿರುವ ರಾಜ್ಯ ಸರ್ಕಾರ, ಇದೀಗ ರಾಜ್ಯ ಬಿಜೆಪಿಯ ಪ್ರಮುಖ ನಾಯಕರಿಗೆ ಸಂಬಂಧಿಸಿದ ವಿವಿ‘ ಪ್ರಕರಣಗಳಿಗೆ ಮರುಜೀವ ನೀಡಲು ಗಂಭೀರ ಚಿಂತನೆ ನಡೆಸುತ್ತಿದೆ.
ಬೆಂಗಳೂರು(ಆ.04): ಕೇಂದ್ರದ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣಕ್ಕೆ ಇಳಿದಿದೆ ಎಂಬ ನಿಲುವಿಗೆ ಬಂದಿರುವ ರಾಜ್ಯ ಸರ್ಕಾರ, ಇದೀಗ ರಾಜ್ಯ ಬಿಜೆಪಿಯ ಪ್ರಮುಖ ನಾಯಕರಿಗೆ ಸಂಬಂಧಿಸಿದ ವಿವಿ‘ ಪ್ರಕರಣಗಳಿಗೆ ಮರುಜೀವ ನೀಡಲು ಗಂಭೀರ ಚಿಂತನೆ ನಡೆಸುತ್ತಿದೆ.
ಬಿ.ಎಸ್. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪ, ಜಗದೀಶ್ ಶೆಟ್ಟರ್, ಬಿ.ಜೆ. ಪುಟ್ಟಸ್ವಾಮಿ, ಶ್ರೀರಾಮುಲು, ಶಾಸಕರಾದ ಅಶ್ವತ್ಥನಾರಾಯಣ, ಸಂಸದ ಪಿ.ಸಿ. ಮೋಹನ್ ಸೇರಿದಂತೆ ಪ್ರಮುಖ ನಾಯಕರ ಬಗ್ಗೆ ಈಗಾಗಲೇ ಇರುವ ಪ್ರಕರಣಗಳಿಗೆ ಮರುಜೀವ ನೀಡುವುದು. ತನ್ಮೂಲಕ ಬಿಜೆಪಿಯ ಈ ನಾಯಕರು ಸಹ ರೇಜಿಗೆ ಹುಟ್ಟಿಸುವಷ್ಟರ ಮಟ್ಟಿಗೆ ಆಸ್ತಿ ಸಂಗ್ರಹ ಮಾಡಿದ್ದಾರೆ ಎಂಬ ವಿಷಯವನ್ನು ಸಾರ್ವಜನಿಕರ ಸಮ್ಮುಖಕ್ಕೆ ತರುವ ಬಗ್ಗೆ ಸರ್ಕಾರದಲ್ಲಿ ಗಂಭೀರ ಚಿಂತನೆ ನಡೆದಿದೆ. ಒಟ್ಟಾರೆ, ಕನಿಷ್ಠ ಮೂವರು ಪ್ರಮುಖ ಬಿಜೆಪಿ ನಾಯಕರನ್ನು ಜೈಲಿಗೆ ಕಳುಹಿಸುವ ಮೂಲಕ ಬಿಜೆಪಿಯಲ್ಲೂ ತಿಮಿಂಗಿಲಗಳು ಭರ್ಜರಿಯಾಗಿಯೇ ಇವೆ ಎಂಬುದನ್ನು ಜನರ ಮುಂದೆ ಅನಾವರಣಗೊಳಿಸುವ ಚಿಂತನೆ ಸರ್ಕಾರಕ್ಕೆ ಇದೆ ಎನ್ನಲಾಗುತ್ತಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ರಾಜ್ಯ ಸರ್ಕಾರದ ಆಯಕಟ್ಟಿನ ಸ್ಥಾನಗಳಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಕರೆದು ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಭ್ರಷ್ಟಾಚಾರ ನಿಗ್ರಹ ದಳದ ಆಯ್ದ ಅಧಿಕಾರಿಗಳು, ಸಿಐಡಿಯ ಹಿರಿಯ ಅಧಿಕಾರಿಗಳು ಹಾಗೂ ಬೆಂಗಳೂರು ನಗರದಲ್ಲಿ ಸದ್ಯ ಕಾರ್ಯನಿರ್ವ ಹಿಸುತ್ತಿರುವ ಮತ್ತು ಈ ಹಿಂದೆ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಮತ್ತು ಲೋಕಾಯುಕ್ತದಲ್ಲಿ ಹಿಂದೆ ಇದ್ದ ಅಧಿಕಾರಿಗಳೊಂದಿಗೆ ಪ್ರತ್ಯೇಕ ಮಾತುಕತೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
ಮುಖ್ಯವಾಗಿ ಬೆಂಗಳೂರು ಮತ್ತು ಸುತ್ತಮುತ್ತಲಿನ ವಿಧಾನಸಭಾ ಕ್ಷೇತ್ರಗಳಲ್ಲಿ ಭೂಹಗರಣಗಳಲ್ಲಿ ಸಿಲುಕಿರುವ ಬಿಜೆಪಿ ಶಾಸಕರ ವಿರುದ್ಧದ ದೂರುಗಳ ಬಗೆಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ಸಂಗ್ರಹಿಸುತ್ತಿದೆ. ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಮತ್ತು ಸಚಿವರುಗಳ ಮೇಲಿರುವ ತನಿಖಾ ಹಂತದಲ್ಲಿರುವ ಪ್ರಕರಣಗಳ ವಿವರಗಳನ್ನು ಖುದ್ದು ಸಿಎಂ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಯಡಿಯೂರಪ್ಪ ಅವರ ಆಪ್ತ ಸಿಬ್ಬಂದಿ ಪ್ರಕರಣ, ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿಯ ಜಮಖಾನ ಮೈದಾನ ಭೂಕಬಳಿಕೆ ಪ್ರಕರಣ, ಶೋಭಾ ಕರಂದ್ಲಾಜೆ ಅವರ ವಿದ್ಯುತ್ ಖರೀದಿ ಹಗರಣ, ಬೆಂಗಳೂರಿನ ಬಿಜೆಪಿ ಶಾಸಕರಾದ ಎಸ್.ಆರ್.ವಿಶ್ವನಾಥ್, ಡಾ.ಅಶ್ವತ್ಥನಾರಾಯಣ, ಮುನಿರಾಜು, ಬಿ. ಜೆ.ಪುಟ್ಟಸ್ವಾಮಿ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಸಂಸದ ಪಿ.ಸಿ.ಮೋಹನ್ ಮತ್ತಿತರರ ವಿರುದ್ಧ ಭೂಹಗರಣ ಮತ್ತು ಭ್ರಷ್ಟಾಚಾರ ಹಗರಣಗಳ ತನಿಖೆಯನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ಗಂಭೀರ ಪ್ರಯತ್ನ ನಡೆದಿದೆ.
ವಿಶ್ವ ಗಾಣಿಗ ಟ್ರಸ್ಟ್ ಹೆಸರಿನಲ್ಲಿ 40 ಕೋಟಿ ರು. ಮೌಲ್ಯದ ಟಿ.ದಾಸನಪುರ ಬಳಿಯ 10 ಎಕರೆ ಗೋಮಾಳ ಜಮೀನು ಖರೀದಿ ಪ್ರಕರಣದಲ್ಲಿ ಪುಟ್ಟಸ್ವಾಮಿ ಮತ್ತು ಅಂದಿನ ಡಿ.ಸಿ. ಅಯ್ಯಪ್ಪ ವಿರುದ್ಧದ ಪ್ರಕರಣದಲ್ಲಿ ಪುಟ್ಟಸ್ವಾಮಿ ವಿರುದ್ಧ ಶೀಘ್ರ ಕ್ರಮಕ್ಕೆ ಸರ್ಕಾರ ಮುಂದಾಗಲಿದೆ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ನಡುವಿನ ಹೈಕಮಾಂಡ್ಗೆ ಹಣ ನೀಡಿದ ಸಂಬಂಧ ಆಪ್ತ ಮಾತುಕತೆ ಕುರಿತಂತೆ ಕೆಪಿಸಿಸಿ ಕಾನೂನು ಘಟಕ ನೀಡಿರುವ ದೂರಿನ ಪ್ರಕರಣಗಳನ್ನು ಚುರುಕುಗೊಳಿಸಲು ಸರ್ಕಾರ ಯೋಚಿಸುತ್ತಿದೆ ಎನ್ನಲಾಗುತ್ತಿದೆ.
ಇನ್ನು ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ.ರವಿ ಮತ್ತು ಸಂಸದ ಬಿ.ಶ್ರೀರಾಮುಲು ವಿರುದ್ಧದ ಹಗರಣಗಳು ಮತ್ತು ಶಾಸಕ ಡಿ.ಎನ್.ಜೀವರಾಜ್, ಮಾಜಿ ಸಚಿವ ಎ.ರಾಮದಾಸ್ ಮತ್ತು ಹರತಾಳು ಹಾಲಪ್ಪ ಅವರ ವಿರುದ್ಧದ ಅತ್ಯಾಚಾರ ಪ್ರಕರಣಗಳ ಕುರಿತಾಗಿಯೂ ಸಮಗ್ರ ಮಾಹಿತಿ ಸಂಗ್ರಹಿಸಿ, ಪ್ರಕರಣಗಳು ಯಾವ ಹಂತದಲ್ಲಿವೆ ಎಂಬುದರ ಕುರಿತು ತಿಳಿಸುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.
2 ಕೋಟಿ ರು. ಮರುತನಿಖೆ: ವಿಧಾನಸೌ‘ದಲ್ಲಿ 2 ಕೋಟಿ ರು. ಜಪ್ತಿ ಮಾಡಿದ ಪ್ರಕರಣದ ಹಿನ್ನೆಲೆಯನ್ನೂ ಕೂಡ ಮರುತನಿಖೆ ನಡೆಸುವ ಚಿಂತನೆ ನಡೆದಿದೆ
