ನಾನು ಹಿಂದೂ ಎಂದು ನನಗೆ ಹೆಮ್ಮೆ ಇದೆ. ನಾನು ಬ್ರಾಹ್ಮಣ ಎಂದು ಹೇಳಿಕೊಳ್ಳುವುದರಲ್ಲೂ ಹೆಮ್ಮೆಯಿದೆ ಎಂದು ರಾಜ್ಯ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.  

ಬೆಂಗಳೂರು (ಡಿ.28): ನಾನು ಹಿಂದೂ ಎಂದು ನನಗೆ ಹೆಮ್ಮೆ ಇದೆ. ನಾನು ಬ್ರಾಹ್ಮಣ ಎಂದು ಹೇಳಿಕೊಳ್ಳುವುದರಲ್ಲೂ ಹೆಮ್ಮೆಯಿದೆ ಎಂದು ರಾಜ್ಯ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ನಮ್ಮ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಾನು ರಾಮ ಅಂದಿದ್ದಾರೆ. ನಾನು ಹೇಳುತ್ತೇನೆ ನಾನು ರಘುನಾಥ ಪ್ರಭು ರಾಮಚಂದ್ರನ ಅವತಾರ. ರಾಮ ಮಂದಿರ ಕಟ್ಟುವ ಬಿಜೆಪಿ ನಾಯಕರುಮೊದಲು ನನ್ನ ಆಶೀರ್ವಾದ ಪಡೆಯಬೇಕು ಎಂದಿದ್ದಾರೆ.

ಎಲ್ಲ ಧರ್ಮದಲ್ಲಿಯೂ ಒಳ್ಳೆಯವರು ಇದ್ದಾರೆ. ಎಲ್ಲ ಧರ್ಮದಲ್ಲಿಯೂ ಕೆಟ್ಟವರು ಇದ್ದಾರೆ. ಜಾತಿಯ ವಿಷ ಬೀಜ ಬಿತ್ತಿ ಗಲಭೆ ನಡೆಸುವುದು ಸರಿಯಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ನಾಯಕರ ತಲೆ ಸರಿ ಇರೋದಿಲ್ಲ. ಕಾನೂನು ಸುವವ್ಯಸ್ಥೆ ಕೆಡಿಸುವ ಕೆಲಸ ಮಾಡಬಾರದು. ರಾಜಕಾರಣಿಗಳು ಸಮಾಜದಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಶಾಂತಿ ಸುವವ್ಯಸ್ಥೆ ಕಾಪಾಡಲು ಶ್ರಮಿಸಬೇಕು. ಚುನಾವಣೆ ಸಂದರ್ಭದಲ್ಲಿ ನಿಮ್ಮ ಪಕ್ಷದ ಕೆಲಸ ಮಾಡಲಿ. ಇತ್ತೀಚಿಗೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಅರಾಜಕತೆ ಸೃಷ್ಠಿಸುವ ಕೆಲಸ ಆಗಿದೆ. ಸಮಾಜದಲ್ಲಿ ಇಂಥ ಕೆಲಸ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ ಎಂದು ದೇಶಪಾಂಡೆ ಬಿಜೆಪಿ ನಾಯಕರಿಗೆ ನೀತಿ ಬೋಧನೆ ಮಾಡಿದ್ದಾರೆ.