ಗೌರಿ ಲಂಕೇಶ್ ಸಂಘ-ಪರಿವಾರದ ಅವಹೇಳನ ಮಾಡದೇ ಹೋಗಿದ್ದರೆ ಹತ್ಯೆ ಆಗುತ್ತಿರಲಿಲ್ಲ; ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ
ಗೌರಿ ಲಂಕೇಶ್ ಹತ್ಯೆ ಸಂಬಂಧ ನಿನ್ನೆ ಶೃಂಗೇರಿಯಲ್ಲಿ ಬಿಜೆಪಿ ನಡೆಸಿದ್ದ ಬೈಕ್ ರ್ಯಾಲಿಯ ವೇಳೆ ಶಾಸಕ ಡಿ.ಎನ್ ಜೀವರಾಜ್ ಅವರು ವಿವಾದಾತ್ಮಕ ಹೇಳಿಕೆಗೆ ನೀಡಿದ್ದಾರೆ. ತಮ್ಮ ಪತ್ರಿಕೆಯಲ್ಲಿ ಗೌರಿ ಅವರು ಸಂಘ ಪರಿವಾರದ ಅವಹೇಳನ ಮಾಡದೇ ಹೋಗಿದ್ದರೆ ಹತ್ಯೆ ಆಗುತ್ತಿರಲಿಲ್ಲ ಎಂಬ ಹೇಳಿಕೆಯನ್ನು ಶಾಸಕ ಜೀವರಾಜ್ ಹೇಳಿದ್ದರು.
ಬೆಂಗಳೂರು (ಸೆ.07): ಗೌರಿ ಲಂಕೇಶ್ ಹತ್ಯೆ ಸಂಬಂಧ ನಿನ್ನೆ ಶೃಂಗೇರಿಯಲ್ಲಿ ಬಿಜೆಪಿ ನಡೆಸಿದ್ದ ಬೈಕ್ ರ್ಯಾಲಿಯ ವೇಳೆ ಶಾಸಕ ಡಿ.ಎನ್ ಜೀವರಾಜ್ ಅವರು ವಿವಾದಾತ್ಮಕ ಹೇಳಿಕೆಗೆ ನೀಡಿದ್ದಾರೆ. ತಮ್ಮ ಪತ್ರಿಕೆಯಲ್ಲಿ ಗೌರಿ ಅವರು ಸಂಘ ಪರಿವಾರದ ಅವಹೇಳನ ಮಾಡದೇ ಹೋಗಿದ್ದರೆ ಹತ್ಯೆ ಆಗುತ್ತಿರಲಿಲ್ಲ ಎಂಬ ಹೇಳಿಕೆಯನ್ನು ಶಾಸಕ ಜೀವರಾಜ್ ಹೇಳಿದ್ದರು.
ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಶಾಸಕರ ಈ ಹೇಳಿಕೆಯ ಅರ್ಥವೇನು? ಹತ್ಯೆ ಹಿಂದೆ ಯಾರಿದ್ದಾರೆ ಎಂಬುದು ಇದರಿಂದ ಅರ್ಥ ಆಗುವುದಿಲ್ಲವೇ? ಎಂದರು.