ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಯಾವುದೇ ನಾಯಕರು ಬೇರೆ ಸಮಾವೇಶಗಳು ನಡೆಸುವಂತಿಲ್ಲ.
ಬೆಂಗಳೂರು(ಡಿ.4): ಸಂಗೊಳ್ಳಿರಾಯಣ್ಣ ಬ್ರಿಗೇಡ್ಗೆ ಬಿಜೆಪಿ ಬೆಂಬಲಿಸುವುದಿಲ್ಲ. ಪಕ್ಷದ ನಾಯಕರು ಬ್ರಿಗೇಡ್ನಲ್ಲಿ ಮುಂದುವರಿದರೆ ಪಕ್ಷದ ರಾಷ್ಟ್ರೀಯ ನಾಯಕರು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಕಟಚಾರಕ್ಕೆ ನಡೆದಿದೆ. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸಿಲ್ಲ. ಬರಗಾಲಕ್ಕೂ ಮುತುವರ್ಜಿ ವಹಿಸಿಲ್ಲ. ಬರಗಾಲ ಸಂಬಂಧ ಬಿಜೆಪಿ ಆರು ತಂಡಗಳನ್ನು ರಚಿಸಿ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಮಾತನಾಡಿ, ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಯಾವುದೇ ನಾಯಕರು ಬೇರೆ ಸಮಾವೇಶಗಳು ನಡೆಸುವಂತಿಲ್ಲ. ಈಶ್ವರಪ್ಪ ಅವರು ಬ್ರಿಗೇಡ್ ಮುಂದುವರೆಸಿದ್ರೆ, ಅದರ ಕ್ರಮ ಪಕ್ಷದ ನಾಯಕರು ತೆಗೆದುಕೊಳ್ಳುತ್ತಾರೆ. ಈಶ್ವರಪ್ಪ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರು ಓಬಿಸಿ ಮೋರ್ಚಾದಲ್ಲಿ ಭಾಗಿಯಾಗಿದ್ದರು. ಬೇರೆ ಸಮಾವೇಶವನ್ನು ಮಾಡುವುದಿಲ್ಲ ಎಂಬ ನಂಬಿಕೆಯಿದೆ. ಬಿಜೆಪಿ ಕಾರ್ಯಕರ್ತರು ಕೇವಲ ಬಿಜೆಪಿಯನ್ನು ಬೆಂಬಲಿಸುತ್ತಾರೆ. ಯಡಿಯೂರಪ್ಪ ನಮ್ಮ ಮುಂದಿನ ಸಿಎಂ ಅಭ್ಯರ್ಥಿ, ಇದಕ್ಕೆ ಈಶ್ವರಪ್ಪನವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
