ಬಿಜೆಪಿಯಿಂದ ಮತ್ತೊಂದು ಆಪರೇಷನ್ !
ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನ ನಡೆಯುತ್ತಿದ್ದು ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕ ತಮ್ಮ ಮೇಲೂ ಕೂಡ ಆಪರೇಷನ್ ಕಮಲದ ಅಸ್ತ್ರ ಪ್ರಯೋಗವಾಗಿತ್ತು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ.
ಚಿಕ್ಕಮಗಳೂರು : ರಾಜ್ಯದಲ್ಲಿ ಅಪರೇಷನ್ ಕಮಲಕ್ಕೆ ಭರ್ಜರಿ ಯತ್ನ ನಡೆಯುತ್ತಿದೆ ಎನ್ನುವ ಆರೋಪದ ನಡುವೆಯೇ ಇನ್ನೋರ್ವ ಕಾಂಗ್ರೆಸ್ ಶಾಸಕನಿಗೆ ಬಿಜೆಪಿ ಗಾಳ ಹಾಕಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಅವರಿಗೂ ಕೂಡ ಬಿಜೆಪಿಗೆ ಸೇರುವಂತೆ ಕೇಳಲಾಗಿದೆ ಎನ್ನಲಾಗಿದ್ದು, ಕೇಲವು ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ತಮ್ಮನ್ನು ಸಂಪರ್ಕ ಮಾಡಿದ್ದರು. ಅದನ್ನ ನಾನು ತಿರಸ್ಕಾರ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ತಾವು ಹೋಗುವುದಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಮ್ಮ ನಾಯಕರಾಗಿದ್ದು, ನಾನು ತತ್ವ ಸಿದ್ಧಾಂತಗಳ ಮೇಲೆ ರಾಜಕೀಯಕ್ಕೆ ಬಂದವನು. ಶಿವಮೊಗ್ಗದಿಂದ ಬಿಜೆಪಿಯ ಕೆಲವು ಮುಖಂಡರು ಭಾರೀ ಮೊತ್ತದ ಹಣದ ಆಮಿಷ ಒಡ್ಡಿಯೇ ಆಫರ್ ನೀಡಿದ್ದರು ಎಂದು ಅವರು ಹೇಳಿದ್ದಾರೆ.
ಹೀಗೆ ಭಾರಿ ಹಣದ ಆಮಿಷ ಒಡ್ಡುತ್ತಿರುವ ಬಿಜೆಪಿ ಆಪರೇಷನ್ ಕಮಲಕ್ಕೆ ನೀಡುವ ಹಣ ಭ್ರಷ್ಟಾಚಾರದ್ದು ಅಲ್ಲವೇ ಎಂದು ಸುವರ್ಣ ನ್ಯೂಸ್ ಡಾಟ್ ಕಾಂ ಗೆ ಶಾಸಕ ಟಿ.ಡಿ ರಾಜೇಗೌಡ ಹೇಳಿದ್ದಾರೆ.