ಕೊನೆಗೂ ರಾಜ್ಯ ಸಮ್ಮಿಶ್ರ ಸರ್ಕಾರ  ಪತನ| ಸರ್ಕಾರ ರಚನೆಯ ಕಸರತ್ತು ಶುರು ಮಾಡಿದ ಬಿಜೆಪಿ| ರಾಜ್ಯಪಾಲರ ಮುಂದೆ ಸರ್ಕಾರ ರಚನೆಯ ಹಕ್ಕು ಮಂಡನೆ ಸಾಧ್ಯತೆ| ಗುರುವಾರ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸಾಧ್ಯತೆ?| ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ? 

ಬೆಂಗಳೂರು(ಜು.23): ರಾಜ್ಯ ಮೈತ್ರಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ, ಬಿಜೆಪಿ ಸರ್ಕಾರ ರಚನೆಯ ಕಸರತ್ತು ಶುರು ಮಾಡಿದೆ. ಮೂಲಗಳ ಪ್ರಕಾರ ನಾಳೆ(ಜು.24) ರಾಜ್ಯಪಾಲರ ಮುಂದೆ ಯಡಿಯೂರಪ್ಪ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುರುವಾರ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ ಎನ್ನಲಾಗಿದೆ.

Scroll to load tweet…

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಎಸ್ ಯಡಿಯೂರಪ್ಪ, ಸರ್ಕಾಶರ ರಚನೆಯ ಕುರಿತು ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.