ಅಮಿತ್ ಶಾ ಕರ್ನಾಟಕ ಪ್ರವಾಸ ದಿಢೀರ್ ರದ್ದು: ಕಾರಣ..?
ಜ.9 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ತುಮಕೂರು ಪ್ರವಾಸ ರದ್ದಾಗಿದೆ. ಕಾರಣ..?
ಬೆಂಗಳೂರು, [ಜ.06]: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ತುಮಕೂರು ಪ್ರವಾಸ ರದ್ದಾಗಿದೆ.
ಅಮಿತ್ ಶಾ ಜ.9 ರಂದು ತುಮಕೂರಿನಲ್ಲಿ ಆಯೋಜಿಸಿದ್ದ ಪಕ್ಷದ ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಅಷ್ಟೇ ಅಲ್ಲದೇ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಆಗಮಿಸುತ್ತಿದ್ದರು.
ಆದ್ರೆ, ನವದೆಹಲಿಯಲ್ಲಿ ಸಂಸತ್ ಅಧಿವೇಶನದ ನಡೆಯುತ್ತಿದೆ. ಅಲ್ಲದೇ, ಅಧಿವೇಶನದ ಅವಧಿ ಕೂಡಾ ವಿಸ್ತರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅಮಿತ್ ಶಾ ಸಂಸತ್ ಕಲಾಪದಲ್ಲಿ ಪಾಲ್ಗೊಳ್ಳಬೇಕಾಗಿದೆ. ಹಾಗಾಗಿ ರಾಜ್ಯ ಪ್ರವಾಸ ರದ್ದು ಮಾಡಿದ್ದಾರೆ.
ಅಧಿವೇಶನ ಮುಕ್ತಾಯದ ನಂತರ ಶಾ ಪ್ರವಾಸದ ದಿನಾಂಕ ನಿಗದಿಯಾಗಲಿದೆ ಎಂದು ರಾಜ್ಯ ಬಿಜೆಪಿ ಕಾರ್ಯಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.