ಬರ್ಲಿನ್ನಲ್ಲಿ ನಿಂತು ಆರ್ಎಸ್ಎಸ್-ಬಿಜೆಪಿ ಕಟುಕಿದ ರಾಹುಲ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್ ಎಸ್ ಎಸ್ ಮೇಲೆ ವಾಗ್ದಾಳಿ ಮಾಡಿದ್ದಾರೆ. ದೂರದ ಜರ್ಮನಿಯ ಬರ್ಲಿನ್ ನಲ್ಲಿ ನಿಂತು ಬಿಜೆಪಿ ಮೇಲೆ ಟೀಕಾ ಪ್ರಹಾರ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್ ಎಸ್ ಎಸ್ ಮೇಲೆ ವಾಗ್ದಾಳಿ ಮಾಡಿದ್ದಾರೆ. ದೂರದ ಜರ್ಮನಿಯ ಬರ್ಲಿನ್ ನಲ್ಲಿ ನಿಂತು ಬಿಜೆಪಿ ಮೇಲೆ ಟೀಕಾ ಪ್ರಹಾರ ಮಾಡಿದ್ದಾರೆ.
ಬರ್ಲಿನ್[ಆ.24] ಬಿಜೆಪಿ ಮತ್ತು ಆರ್ ಎಸ್ ಎಸ್ ಭಾರತವನ್ನು ಒಡೆದು ಆಳುತ್ತಿದೆ. ಮಾತ್ರವಲ್ಲದೆ ಜನರಲ್ಲಿ ಕೋಮು ಭಾವನೆ ಹೆಚ್ಚಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.
ಜರ್ಮನಿಯಲ್ಲಿ ನೆಲೆಸಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಭಾರತದಲ್ಲಿ ರೈತರು ನಿರಂತರವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ. ವಿವಿಧತೆಯಲ್ಲಿ ಏಕತೆಯನ್ನು ಬಿಜೆಪಿ ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.