Published : Apr 10 2017, 10:31 AM IST| Updated : Apr 11 2018, 12:53 PM IST
Share this Article
FB
TW
Linkdin
Whatsapp
PM Narendra Modi
ಸಿಎಂ ಅಭ್ಯರ್ಥಿ ಇಲ್ಲದೆ ಚುನಾವಣೆ ಎದುರಿಸಲು ತಯಾರಿ | ರಾಜ್ಯದಲ್ಲಿ ಪಟೇಲ್ ಬಂಡಾಯ ಹತ್ತಿಕ್ಕುವ ಅನಿವಾರ್ಯತೆ | ತವರು ರಾಜ್ಯವಾದ ಕಾರಣ ಮೋದಿ, ಶಾಗೆ ಪ್ರತಿಷ್ಠೆಯ ಪ್ರಶ್ನೆ
ಅಹಮದಾಬಾದ್: ಪಂಚರಾಜ್ಯಗಳ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಹುಮ್ಮಸ್ಸಿನಲ್ಲಿರುವ ಬಿಜೆಪಿ, ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಖ ಮುಂದಿಟ್ಟುಕೊಂಡೇ ಎದುರಿಸಲು ಉದ್ದೇಶಿಸಿದೆ.
ಗುಜರಾತ್ ಮಾದರಿ ಅಭಿವೃದ್ಧಿಯನ್ನೇ ಪಠಿಸುತ್ತಾ ಪ್ರಧಾನಿ ಹುದ್ದೆಗೇರಿದ ಮೋದಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಸಮರವಾಗಿದೆ. 22 ವರ್ಷಗಳಿಂದ ನಿರಂತರವಾಗಿ ಅಧಿಕಾರದಲ್ಲಿರುವ ಬಿಜೆಪಿಗೆ ಗುಜರಾತಿನಲ್ಲಿ ಆಡಳಿತ ವಿರೋಧಿ ಅಲೆಯ ಬಿಸಿ ತಟ್ಟುವ ಸಾಧ್ಯತೆಯೂ ಇದೆ. ಜತೆಗೆ ಗುಜರಾತಿನ ಜನಸಮೂಹವನ್ನು ಸೆಳೆಯುವ ಪ್ರಬಲ ನಾಯಕರ ಕೊರತೆಯೂ ಇದೆ. ಹೀಗಾಗಿ ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸದೇ ಮೋದಿ ಮುಖವನ್ನೇ ಮುಂದು ಮಾಡಿ ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಹಿರಿಯ ನಾಯಕರು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಉತ್ತರಪ್ರದೇಶ, ಉತ್ತರಾಖಂಡ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲೂ ಬಿಜೆಪಿ ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿರಲಿಲ್ಲ. ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತವರು ರಾಜ್ಯವಾಗಿರುವ ಕಾರಣಕ್ಕೆ ಗುಜರಾತ್ ಚುನಾವಣೆ ಆ ಇಬ್ಬರೂ ನಾಯಕರ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.