ಸಿಎಂ ಅಭ್ಯರ್ಥಿ ಇಲ್ಲದೆ ಚುನಾವಣೆ ಎದುರಿಸಲು ತಯಾರಿ | ರಾಜ್ಯದಲ್ಲಿ ಪಟೇಲ್ ಬಂಡಾಯ ಹತ್ತಿಕ್ಕುವ ಅನಿವಾರ್ಯತೆ | ತವರು ರಾಜ್ಯವಾದ ಕಾರಣ ಮೋದಿ, ಶಾಗೆ ಪ್ರತಿಷ್ಠೆಯ ಪ್ರಶ್ನೆ

ಅಹಮದಾಬಾದ್‌: ಪಂಚರಾಜ್ಯಗಳ ಚುನಾವಣೆ​ಯಲ್ಲಿ ಜಯಭೇರಿ ಬಾರಿಸಿದ ಹುಮ್ಮಸ್ಸಿನಲ್ಲಿರುವ ಬಿಜೆಪಿ, ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್‌ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಖ ಮುಂದಿಟ್ಟುಕೊಂಡೇ ಎದುರಿಸಲು ಉದ್ದೇಶಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಜರಾತ್‌ ಮಾದರಿ ಅಭಿವೃದ್ಧಿಯನ್ನೇ ಪಠಿಸುತ್ತಾ ಪ್ರಧಾನಿ ಹುದ್ದೆಗೇರಿದ ಮೋದಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಸಮರವಾಗಿದೆ. 22 ವರ್ಷಗಳಿಂದ ನಿರಂತ​ರವಾಗಿ ಅಧಿಕಾರದಲ್ಲಿರುವ ಬಿಜೆಪಿಗೆ ಗುಜರಾತಿನಲ್ಲಿ ಆಡಳಿತ ವಿರೋಧಿ ಅಲೆಯ ಬಿಸಿ ತಟ್ಟುವ ಸಾಧ್ಯತೆಯೂ ಇದೆ. ಜತೆಗೆ ಗುಜರಾತಿನ ಜನಸಮೂಹವನ್ನು ಸೆಳೆಯುವ ಪ್ರಬಲ ನಾಯಕರ ಕೊರತೆಯೂ ಇದೆ. ಹೀಗಾ​ಗಿ ಯಾರನ್ನೂ ಮುಖ್ಯಮಂತ್ರಿ ಅಭ್ಯ​ರ್ಥಿ ಎಂದು ಬಿಂಬಿಸದೇ ಮೋದಿ ಮುಖವನ್ನೇ ಮುಂದು ಮಾಡಿ ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಹಿರಿಯ ನಾಯಕರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಉತ್ತರಪ್ರದೇಶ, ಉತ್ತರಾ​ಖಂಡ ಸೇರಿದಂತೆ ಪಂಚರಾಜ್ಯ ಚುನಾವಣೆ​ಗಳಲ್ಲೂ ಬಿಜೆಪಿ ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿರಲಿಲ್ಲ. ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ತವರು ರಾಜ್ಯವಾಗಿರುವ ಕಾರಣಕ್ಕೆ ಗುಜರಾತ್‌ ಚುನಾವಣೆ ಆ ಇಬ್ಬರೂ ನಾಯಕರ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.