‘ಮೈತ್ರಿ ಸಚಿವರಿಂದ ಅತೃಪ್ತರಿಗಿದೆ ಈ ಬೆದರಿಕೆ : ಇದು ಶೋಭೆಯಲ್ಲ’
ಮೈತ್ರಿ ಸಚಿವರಿಂದ ಅತೃಪ್ತರಾಗಿ ಹೊರ ನಡೆದಿರುವವರಿಗೆ ಈ ಬೆದರಿಕೆ ಇಂತಹದ್ದೊಂದು ಬೆದರಿಕೆ ಇದ್ದು, ಇದು ಸೂಕ್ತ ನಡೆಯಲ್ಲ. ಹೀಗೆಂದು ಬಿಜೆಪಿ ನಾಯಕರೋರ್ವರು ಹೇಳಿದ್ದಾರೆ.
ಬೆಂಗಳೂರು [ಜು.17] : ಕರ್ನಾಟಕ ರಾಜಕೀಯ ಪ್ರಹಸನದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಪ್ರಕಟವಾದ ಮಹತ್ವದ ತೀರ್ಪನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸ್ವಾಗತಿಸಿದ್ದಾರೆ.
ವಿಶ್ವಾಸಮತಕ್ಕೆ ಆಗಮಿಸಲು ಅತೃಪ್ತರಿಗೆ ಒತ್ತಡ ಹೇರಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಸದನದಲ್ಲಿ ಬಿಜೆಪಿ ಬಹುಮತ ಹೊಂದಲು ಅವಕಾಶ ಇದೆ ಎಂದು ಪೂಜಾರಿ ಹೇಳಿದ್ದಾರೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮೈತ್ರಿ ಸರ್ಕಾರದ ಸಚಿವರು ಅತೃಪ್ತ ಶಾಸಕರನ್ನು ಅನರ್ಹ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ರೀತಿಯಾಗಿ ಒತ್ತಡ ಹೇರುವುದು ಸಚಿವ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು.
ಮೈತ್ರಿ ಸರ್ಕಾರ ಪತನದ ಅಂಚಿನಲ್ಲಿ ಇದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.