ಈಗಾಗಲೇ ಮೈತ್ರಿ ಕೂಟದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಆಷಾಢದ ಬಳಿಕ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ. 

ಮಂಡ್ಯ [ಜು.2] : ಆಷಾಢದ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಸೋಮವಾರ ದೃಢವಾಗಿ ಹೇಳಿದರು.

Add Asianetnews Kannada as a Preferred SourcegooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ್‌ ಬಿಜೆಪಿಯಿಂದ ಆಪರೇಷನ್‌ ಕಮಲ ನಡೆಸುವುದಿಲ್ಲ. ಆದರೆ, ರಾಜ್ಯದ ಮೈತ್ರಿ ಸರ್ಕಾರದ ಎರಡೂ ಪಕ್ಷಗಳ ನಡುವೆ ತಾರತಮ್ಯ- ಕಂದಕ ಹೆಚ್ಚಾಗಿದೆ. ಹೀಗಾಗಿ ಮೈತ್ರಿ ಸರ್ಕಾರ ತಾನಾಗಿಯೇ ಸರಕಾರ ತನಗೆ ತಾನೇ ಪತನಗೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ನಡವಳಿಕೆಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್‌ನಂತೂ ಅಸಹಕಾರ, ಅಸಹನೆ ಗುಂಪುಗಾರಿಕೆ ಹೆಚ್ಚಾಗಿದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರ ನಡುವಿನ ತಾರತಮ್ಯ ಎದ್ದುಕಾಣುತ್ತಿದೆ. ಈ ತಾರತಮ್ಯ ಸಹಿಸದ ಅತೃಪ್ತ ಶಾಸಕರು ರಾಜೀನಾಮೆ ನೀಡುವ ಹಾದಿಯಲ್ಲಿದ್ದಾರೆ. ಶಾಸಕ ಆನಂದ್‌ಸಿಂಗ್‌ ರಾಜೀನಾಮೆ ನೀಡುವುದರ ಮೂಲಕ ಪರ್ವ ಆರಂಭಿಸಿದ್ದಾರೆ. ಮುಂದಿನ ಒಂದು ವಾರದಲ್ಲಿ ನಿರೀಕ್ಷೆ ಮಾಡಲಾಗದಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಅಶೋಕ್‌ ಹೊಸ ಬಾಂಬ್‌ ಸಿಡಿಸಿದರು.