ಗೋಮಾಂಸ ಸಾಗಿಸಿದ ಬಿಜೆಪಿಗನಿಗೆ ಥಳಿತ
ಗೋಮಾಂಸ ಕೊಂಡೊಯ್ಯುತ್ತಿದ್ದ ಶಂಕೆಯಲ್ಲಿ ಬಿಜೆಪಿ ಮುಖಂಡನೊಬ್ಬನಿಗೇ ಗುಂಪೊಂದು ಥಳಿಸಿದ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ನಾಗಪುರ: ಗೋಮಾಂಸ ಕೊಂಡೊಯ್ಯುತ್ತಿದ್ದ ಶಂಕೆಯಲ್ಲಿ ಬಿಜೆಪಿ ಮುಖಂಡನೊಬ್ಬನಿಗೇ ಗುಂಪೊಂದು ಥಳಿಸಿದ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕತೋಳ್ ನಿವಾಸಿ ಸಲೀಂ ಇಸಮಾಯೀಲ್ ಶೇಖ್ ಥಳಿತಕ್ಕೊಳಗಾಗಿದ್ದು, ಇವರು ಕತೋಳ್ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಗೋರಕ್ಷಣೆ ಹೆಸರಿನಲ್ಲಿ ಗೋರಕ್ಷಕರು ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈಯುವ ಘಟನೆಗಳು ದೇಶಾದ್ಯಂತ ನಡೆಯುತ್ತಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.