ಗೋಮಾಂಸ ಕೊಂಡೊಯ್ಯುತ್ತಿದ್ದ ಶಂಕೆಯಲ್ಲಿ ಬಿಜೆಪಿ ಮುಖಂಡನೊಬ್ಬನಿಗೇ ಗುಂಪೊಂದು ಥಳಿಸಿದ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.  ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ನಾಗಪುರ: ಗೋಮಾಂಸ ಕೊಂಡೊಯ್ಯುತ್ತಿದ್ದ ಶಂಕೆಯಲ್ಲಿ ಬಿಜೆಪಿ ಮುಖಂಡನೊಬ್ಬನಿಗೇ ಗುಂಪೊಂದು ಥಳಿಸಿದ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕತೋಳ್ ನಿವಾಸಿ ಸಲೀಂ ಇಸಮಾಯೀಲ್ ಶೇಖ್ ಥಳಿತಕ್ಕೊಳಗಾಗಿದ್ದು, ಇವರು ಕತೋಳ್ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಗೋರಕ್ಷಣೆ ಹೆಸರಿನಲ್ಲಿ ಗೋರಕ್ಷಕರು ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈಯುವ ಘಟನೆಗಳು ದೇಶಾದ್ಯಂತ ನಡೆಯುತ್ತಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.