1947ರಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರದ ಮೇಲೆ ಬುಡಕಟ್ಟು ಜನರ ಸೋಗಿನಲ್ಲಿ ಅಕ್ರಮಣ ಮಾಡಿದ ಪಾಕಿಸ್ತಾನಿ ಸೇನೆ ಕಣಿವೆ ರಾಜ್ಯದ ಒಂದು ಮಹತ್ವ ಭಾಗವನ್ನು ವಶಪಡಿಸಿಕೊಂಡಿದ್ದು, ಆಗಿನಿಂದಲೂ ಪಾಕ್ ಆಕ್ರಮಿತ ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ನಡುವೆ ವಿವಾದದ ಕೇಂದ್ರ ಬಿಂದುವಾಗಿದೆ. 

ಮುಜಫರಾಬಾದ್(ಅ.27): ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ವೇಳೆ ಪಾಕಿಸ್ತಾನದ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪ್ರತಿಭಟನಾನಿರತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು ಶಾಂತಿಯುತವಾಗಿ ಧರಣಿ ನಿರತರ ಮೇಲೆ ಅಲ್ಲಿನ ಪೊಲೀಸರು ಮನಸೋ ಇಚ್ಚೆ ಥಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1947ರಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಅತಿಕ್ರಮಣ ಖಂಡಿಸಿ ಪಿಒಕೆಯಲ್ಲಿ ಅಕ್ಟೋಬರ್ 22ರಂದು ಕರಾಳ ದಿನ ಆಚರಿಸಲಾಗಿತ್ತು. ಆಗಿನಿಂದ ಅಲ್ಲಿನ ಜನರ ಮೇಲೆ ಪಾಕಿಸ್ತಾನಿ ಸೈನಿಕರು ಮತ್ತು ಪೊಲೀಸರು ನಿರಂತರ ದೌರ್ಜನ್ಯ ನಡೆಸುತ್ತಾ ಹಿಂಸೆ ನೀಡುತ್ತಿದ್ದಾರೆ. ಕಾಶ್ಮೀರ ಬಿಟ್ಟು ತೊಲಗಿ ಎಂದು ಘೋಷಣೆ ಕೂಗುತ್ತಾ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. 

ಈ ವೇಳೆ ಏಕಾಏಕಿ ದಾಳಿ ನಡೆಸಿದ ಪೊಲೀಸರು ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಪಾಕಿಸ್ತಾನ ಪೊಲೀಸರು ಅಮಾಯಕರ ಮನೆಗಳಿಗೆ ನುಗ್ಗಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. 

1947ರಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರದ ಮೇಲೆ ಬುಡಕಟ್ಟು ಜನರ ಸೋಗಿನಲ್ಲಿ ಅಕ್ರಮಣ ಮಾಡಿದ ಪಾಕಿಸ್ತಾನಿ ಸೇನೆ ಕಣಿವೆ ರಾಜ್ಯದ ಒಂದು ಮಹತ್ವ ಭಾಗವನ್ನು ವಶಪಡಿಸಿಕೊಂಡಿದ್ದು, ಆಗಿನಿಂದಲೂ ಪಾಕ್ ಆಕ್ರಮಿತ ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ನಡುವೆ ವಿವಾದದ ಕೇಂದ್ರ ಬಿಂದುವಾಗಿದೆ.