ತಿರುಪತಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಉಗ್ರರ ಸಂಚು; ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿ ಪತ್ತೆ
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಶಾಕಿಂಗ್ ನ್ಯೂಸ್! ಪುಣ್ಯಕ್ಷೇತ್ರ ತಿರುಪತಿಯಲ್ಲಿ ಉಗ್ರರ ಬಾಂಬ್ ಬ್ಲಾಸ್ಟ್ ಮಾಡಲು ಸಂಚು ರೂಪಿಸಿದ್ದು ಬಯಲಾಗಿದೆ.
ಬೆಂಗಳೂರು( ಜ.30): ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಶಾಕಿಂಗ್ ನ್ಯೂಸ್! ಪುಣ್ಯಕ್ಷೇತ್ರ ತಿರುಪತಿಯಲ್ಲಿ ಉಗ್ರರ ಬಾಂಬ್ ಬ್ಲಾಸ್ಟ್ ಮಾಡಲು ಸಂಚು ರೂಪಿಸಿದ್ದು ಬಯಲಾಗಿದೆ.
ತಿರುಪತಿ ಸನ್ನಿದಿಯಲ್ಲಿ ಭಾರಿ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ತಿರುಪತಿಯ ಮಂಗಾಪುರ ಶ್ರೀವಾರಿ ಮೆಟ್ಬೆಲು ಸಮೀಪದ ಅರಣ್ಯದಲ್ಲಿ ರಕ್ತ ಚಂದನ ಕಳ್ಳರಿಗಾಗಿ ಕೂಂಬಿಂಗ್ ವೇಳೆ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ.
ಭಾರೀ ಪ್ರಮಾಣದ ಬಾಂಬ್ ಸ್ಫೋಟಕ ಸಾಮಗ್ರಿ ಕಂಡು ಪೊಲೀಸರಿಗೆ ಆಶ್ಚರ್ಯವಾಗಿದೆ. ಕಂಟೇನರ್ಸ್, ಕೇಫ್ಗಳು, ಕಾರ್ಡ್ ಬೋರ್ಡ್ಗಳು, ಎಲೆಕ್ಟ್ರಾನಿಕ್ ಸಾಮಾಗ್ರಿಗಳು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಸ್ಥಳಕ್ಕೆ ಐಜಿಪಿ, ಡಿಸಿ, ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಹಲವು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.