ಅಖ್ನೂರ್, ಜಮ್ಮು ಮತ್ತು ಕಾಶ್ಮೀರ (ಅ.06): ಭಾರತೀಯ ಸೇನೆಯು ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಪ್ರತಿದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅಖ್ನೂರ್ ಸೆಕ್ಟರ್ ನಿವಾಸಿಗಳು ಮನೆಗಳನ್ನು ತೊರೆಯುತ್ತಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

Add Asianetnews Kannada as a Preferred SourcegooglePreferred

ಜೀವಭಯ, ಸುರಕ್ಷತೆ ಹಾಗೂ ಇತರೆ ಮೂಲಭೂತ ಅವಶ್ಯಕತೆಗಳ ಅಲಭ್ಯತೆಯಿಂದಾಗಿ ಗ್ರಾಮಸ್ಥರು ಮನೆಗಳನ್ನು ತೊರೆದು ಬೇರೆಡೆಗೆ ವಲಸೆ ಹೋಗುತ್ತಿದ್ದಾರೆ ಎನ್ನಲಾಗಿದೆ.

ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮನೆ-ಮಠ, ವ್ಯವಸಾಯ ಹಾಗೂ ಜಾನುವಾರುಗಳು ಎಲ್ಲವನ್ನೂ ಅಲ್ಲೇ ಬಿಟ್ಟು ಊರನ್ನು ತೊರಯುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತೀಯ ಸೇನೆಯು ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಸತತವಾಗಿ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ.

(ಸಾಂದರ್ಭಿಕ ಚಿತ್ರ)