ಮದುವೆಯಾಗುವುದಾಗಿ ನಂಬಿಸಿ ಮಡಿಕೇರಿಯಲ್ಲಿ ಬೆಂಗಳೂರಿನ ಯುವತಿಯನ್ನು  ರೇಪ್ ಮಾಡಿರುವ ಘಟನೆ  ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು (ಜ.21): ಮದುವೆಯಾಗುವುದಾಗಿ ನಂಬಿಸಿ ಮಡಿಕೇರಿಯಲ್ಲಿ ಬೆಂಗಳೂರಿನ ಯುವತಿಯನ್ನು ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಿಯಕರ ದಿನೇಶ್ ಸ್ನೇಹಿತೆಯನ್ನು ಮುರಡೇಶ್ವರಕ್ಕೆ ಕರೆದೊಯ್ದಿದ್ದ. ಬಸ್ ಮಿಸ್ ಆಯ್ತು ಅಂತಾ ಹೋಂ ಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಎಳನೀರಲ್ಲಿ ಮತ್ತು ಬರಿಸೋ ಔಷಧಿ ಬೆರೆಸಿ ರೇಪ್ ಮಾಡಿದ್ದಾನೆ. ಮದುವೆಯಾಗುವುದಾಗಿ ಯುವತಿಗೆ ಭರವಸೆ ಕೊಟ್ಟಿದ್ದ ದೀನೇಶ್ ಸ್ವಲ್ಪ ದಿನದ ನಂತರ ಬೇರೆ ಹುಡುಗಿಯೊಂದಿಗೆ ಮದುವೆಗೆ ಸಜ್ಜಾಗಿದ್ದರು. ನೊಂದ ಯುವತಿ ನ್ಯಾಯ ದೊರಕಿಸಿಕೊಡಬೇಕು ಎಂದು ಹೆಚ್'ಎಎಲ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.

ಯುವತಿ ಪ್ರಕರಣ ದಾಖಲು ಮಾಡಿಕೊಂಡು ಮಹಜಾರ್ ಮಾಡಿದ ಎಚ್'ಎಎಲ್ ಪೊಲೀಸರು ಬಳಿಕ ಪ್ರಕರಣವನ್ನ ಕೊಡಗು ಜಿಲ್ಲೆಗೆ ವರ್ಗಾವಣೆ ಮಾಡಿದ್ದಾರೆ.