ಪಶ್ಚಿಮ ಬಂಗಾಳದಲ್ಲೊಬ್ಬ ಯುವಕ ತನ್ನ ತಮ್ಮನಿಗೆ ಕೆಲಸ ಸಿಕ್ಕಿದೆ ಎಂಬ ವಿಚಾರ ಅರಗಿಸಿಕೊಳ್ಳಲಾಗಿದೆ ಮನೆಗೇ ಬೆಮಕಿ ಇಟ್ಟ ವಿಚಿತ್ರ ಘಟನೆ ನಡೆದಿದೆ.

ತನ್ನ ಸಹೋದರನಿಗೆ ಸರ್ಕಾರಿ ಕೆಲಸ ಸಿಕ್ಕಿತು ಎಂಬ ಖುಷಿಯಲ್ಲಿ ನೆರೆಹೊರೆಯವರಿಗೆ ಸಿಹಿ ಹಂಚುವ, ಸ್ನೇಹಿತರಿಗೆ ಪಾರ್ಟಿ ಕೊಡಿಸುವವರ ಬಗ್ಗೆ ಕೇಳಿದ್ದೇವೆ. ಆದರೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮಖಾನ್‌ ಎಂಬ ಅಣ್ಣನೊಬ್ಬ ತನ್ನ ಸೋದರ ಸರ್ಕಾರಿ ಕೆಲಸ ಪಡೆದುಕೊಂಡಿದ್ದಕ್ಕೆ ಅಸೂಯೆ ತಾಳಲಾರದೆ ಇಡೀ ಮನೆಗೆ ಬೆಂಕಿ ಇಟ್ಟು ದ್ವೇಷ ಕಾರಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಘಟನೆಯಲ್ಲಿ ಸರ್ಕಾರಿ ಉದ್ಯೋಗ ಸಿಕ್ಕ ಖುಷಿಯಲ್ಲಿದ್ದ ಮಖಾನ್‌ನ ಸೋದರ ಗೋವಿಂದ, ಮತ್ತೊಬ್ಬ ಸೋದರ ಬಿಕಾಸ್‌, ಇಬ್ಬರು ಹೆಣ್ಣುಮಕ್ಕಳು ಕೂಡ ಕರಕಲಾಗಿದ್ದಾರೆ. ಈ ಸಹೋದರರು ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.

ತಂದೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸೋದರ ಪೈಕಿ ಗೋವಿಂದನಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ದೊರಕಿತು. ಇದೇ ಸಿಟ್ಟಿನಲ್ಲಿ ಮಖಾನ್‌ ಮನೆಗೆ ಬೆಂಕಿ ಹಚ್ಚಿದ್ದಾನೆ.