ಇದು ‘ಅಣ್ತಮ್ಮ’ ಬಜೆಟ್: ಯಡಿಯೂರಪ್ಪ ವಾಗ್ದಾಳಿ!
ಕುಮಾರಸ್ವಾಮಿಯದ್ದು ‘ಅಣ್ತಮ್ಮ’ ಬಜೆಟ್
ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ
ಪ್ರಾದೇಶಿಕ ತಾರತಮ್ಯಕ್ಕೆ ತೀವ್ರ ವಿರೋಧ
ಬೆಂಗಳೂರ(ಜು.5): ಸಿಎಂ ಕುಮಾರಸ್ವಾಮಿ ಇಂದು ಮಂಡಿಸಿದ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ನ್ನು ಮಾಜಿ ಸಿಎಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ. ಈ ಬಜೆಟ್ ಕೇವಲ ಮಂಡ್ಯ, ರಾಮನಗರ ಹಾಗೂ ಹಾಸನ ಜಲ್ಲೆಗಳಿಗೆ ಮಾತ್ರ ಮಂಡಿಸಲಾಗಿದೆ ಎಂದು ಯಡಿಯೂರಪ್ಪ ಹರಿಹಾಯ್ದಿದ್ದಾರೆ.
ಕುಮಾರಸ್ವಾಮಿ ಕೇವಲ ಈ ಮೂರು ಜಿಲ್ಲೆಗಳಿಗೆ ಮಾತ್ರ ಪ್ರಾತಿನಿಧ್ಯ ನೀಡಿದ್ದು, ಉಳಿದ ಜಿಲ್ಲೆಗಳನ್ನು ಕಡೆಗಣಿಸಿದ್ದಾರೆ ಎಂದು ಯಡಿಯೂರಪ್ಪ ಆಪಾದಿಸಿದ್ದಾರೆ.ಕೇವಲ 2 ಲಕ್ಷ ಸಾಲ ಮನ್ನಾ ಮಾಡುವ ಮೂಲಕ ಸಿ.ಎಂ ಕೊಟ್ಟ ಮಾತಿಗೆ ತಪ್ಪಿದ್ದು, ರಾಜ್ಯದ ಜನತೆಗೆ ದ್ರೋಹ ಬಗೆದ ಬಜೆಟ್ ಇದಾಗಿದೆ ಎಂದು ಅವರು ಕಿಡಿಕಾರಿದರು.
ಕರಾವಳಿ, ಉತ್ತರ ಕರ್ನಾಟಕ, ಮಲೆನಾಡು ಭಾಗಗಳನ್ನು ಸಂಪೂರ್ಣ ಕಡೆಗಣಿಸಲಾಗಿದ್ದು, ಬಹುಪಾಲು ಅನುದಾನವನ್ನು ಜೆಡಿಎಸ್ ಪ್ರಾಬಲ್ಯದ ಜಿಲ್ಲೆಗಳಿಗೆ ಹೆಚ್ಚಿನ ಸೌಲಭ್ಯ ನೀಡುವ ಮೂಲಕ ತಾರತಮ್ಯ ಮಾಡಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..