ಒಂದು ಕಡೆ ಸಿಎಂ ಕುಮಾರಸ್ವಾಮಿ ಯಡಿಯೂರಪ್ಪ ಅವರ ಮೇಲೆ ವಾಗ್ದಾಳಿ ಮಾಡಿದ ಕೆಲವೆ ಕ್ಷಣದಲ್ಲಿ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕ ಹಕ್ಕು ನಿಮಗೆ ಇಲ್ಲ. ಕಾಂಗ್ರೆಸ್ ಮುಖಂಡರ ಆರೋಪಕ್ಕೆ ಮೊದಲು ಉತ್ತರ ನೀಡಿ ಎಂದು ಯಡಿಯೂರಪ್ಪ ಕುಮಾರಸ್ವಾಮಿಗೆ ಪ್ರತಿ ಸವಾಲು ಹಾಕಿದ್ದಾರೆ. 

ಬೆಂಗಳೂರು[ಸೆ.20] ಒಂದು ಕಾಲದಲ್ಲಿ ಒಟ್ಟಾಗಿ ಸರಕಾರ ಮಾಡಿದ್ದ ಬಿಎಸ್‌ ವೈ ಮತ್ತು ಕುಮಾರಸ್ವಾಮಿ ಇದೀಗ ಬೆಂಕಿ ಬಿರುಗಾಳಿಯಾಗಿದ್ದಾರೆ. ನಿಮ್ಮ ಬಳಿ ಅಧಿಕಾರವಿದೆ ಎಂದು ಸಲ್ಲದ ತನಿಖೆ ಮಾಡುತ್ತೀರಾ? ಮಾಡಿ ನಮ್ಮ ಬಳಿಯೂ ಸರಕಾರವಿದೆ. ಕೇಂದ್ರದಲ್ಲಿ ನಾವೇ ಅಧಿಕಾರದಲ್ಲಿದ್ದೇವೆ ನೆನಪಿರಲಿ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಧ್ಯಾಹ್ನ 4 ಗಂಟೆಗೆ ತುರ್ತು ಪತ್ರಿಕಾ ಗೋಷ್ಠಿ ನಡೆಸಲಿರುವ ಬಿಎಸ್‌ ವೈ ಇನ್ನಷ್ಟು ಮಾಹಿತಿ ಬಹಿರಂಗ ಮಾಡಲಿದ್ದಾರೆ. ಮಾತನಾಡುವ ನೈತಿಕತೆ ಇರದ ಕುಮಾರಸ್ವಾಮಿ ಆರೋಪಗಳಿಗೆ ಉತ್ತರ ನೀಡಲೇಬೇಕಾಗಿಲ್ಲ. ಶಿವರಾಮ ಕಾರಂತ ಬಡಾವಾಣೆ ವಿಚಾರ ತನಿಖೆಯಾಗಲಿ. ನಾನು ಯಾವುದಕ್ಕೂ ಹೆದರಲ್ಲ ಎಂದಿದ್ದಾರೆ. ನಿಮ್ಮ ಕುಟುಂಬ ಮಾಡಿದಷ್ಟು ದ್ರೋಹ, ಈ ಸೇಡಿನ ರಾಜಕಾರಣ ಬಹಳ ಕಾಲ ನಡೆಯಲ್ಲ ಎಂದು ತಿರುಗೇಟು ನೀಡಿದ್ದಾರೆ.

ರಾಜ್ಯ ರಾಜಕಾರಣದಕಲ್ಲಿ ಬಿರುಸಿನ ಚಟುವಟಿಕೆ ಮತ್ತಷ್ಟು ಜೋರಾಗಿದೆ. ಇನ್ನೊಂದು ಕಡೆ 22 ಶಾಸಕರು ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದ್ದು ಮೈತ್ರಿ ಸರಕಾರದ ಭವಿಷ್ಯ ನಿರ್ಧಾರವಾಗಲಿದೆಯೇ? ಎಂಬ ಪ್ರಶ್ನೆ ಸಹ ಮೂಡಿದೆ.

"

"