ಆರ್.ಆರ್.ನಗರ, ವಿಧಾನ ಪರಿಷತ್ತು, ಬಳಿಕ ಇದೀಗ ಜಯನಗರದಲ್ಲಿ ಸೋಲು ಮನೆಯಿಂದ ಹೊರಬಾರದೇ, ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದ ಯಡಿಯೂರಪ್ಪ 

ಬೆಂಗಳೂರು: ಸರಣಿ ಸೋಲಿನಿಂದ ಕಂಗೆಟ್ಟ ಬಿಜೆಪಿ ಕಂಗೆಟ್ಟಿದ್ದು, ಯಡಿಯೂರಪ್ಪ ಆತಂಕಗೊಂಡಿದ್ದಾರೆಂದು ಹೇಳಲಾಗಿದೆ.

Add Asianetnews Kannada as a Preferred SourcegooglePreferred

ವಿಧಾನ ಪರಿಷತ್ತು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶಗಳು ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ ಒಂದು ಸ್ಥಾನ ಕಳೆದುಕೊಂಡಿದೆ. ರಾಜರಾಜೇಶ್ವರಿ ನಗರ ಚುನಾವಣೆಯಲ್ಲೂ ಬಿಜೆಪಿ ಸೋಲನ್ನನುಭವಿಸಿತ್ತು. ಇದೀಗ ಜಯನಗರ ವಿಧಾನಸಭೆ ಕ್ಷೇತ್ರದ ಸೋಲಿನಿಂದ ಬಿಜೆಪಿ ಕಂಗೆಟ್ಟಿದೆಯೆನ್ನಲಾಗಿದೆ.

ಈ ಬೆಳವಣಿಗೆಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪಆತಂಕಗೊಂಡಿದ್ದಾರೆನ್ನಲಾಗಿದೆ. ಮನೆಯಿಂದ ಹೊರಗೆ ಬಾರದೇ, ಮಾಧ್ಯಮಗಳಿಂದಲೂ ಯಡಿಯೂರಪ್ಪ ಅಂತರ ಕಾಯ್ದುಕೊಂಡಿದ್ದರು.

ರಾಜ್ಯ ಇತರ ನಾಯಕರ ವಿರುದ್ಧ ಯಡಿಯೂರಪ್ಪ ಬೇಸರಗೊಂಡಿದ್ದು, ಆಪ್ತರ ಭೇಟಿಗೂ ನಿರಾಕರಿಸುತ್ತಿದ್ದಾರೆಯೆನ್ನಲಾಗಿದೆ.