Asianet Suvarna News Asianet Suvarna News

BSY ಸಂಪುಟದಲ್ಲಿ ಡಿಸಿಎಂ ಭಾಗ್ಯ : ಆಕಾಂಕ್ಷಿಗಳಿಗೆ ನಿರಾಸೆ

ಯಡಿಯೂರಪ್ಪ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಿಗೆ ದೊಡ್ಡ ನಿರಾಸೆ ಕಾದಿದೆ. ಇಲ್ಲಿದೆ ಇದರ ಕಥೆ

BS Yediyurappa Govt unlikely to Have DCm Post
Author
Bengaluru, First Published Aug 23, 2019, 11:52 AM IST

ಬೆಂಗಳೂರು [ಆ.23]: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಾಧ್ಯತೆ ಕ್ಷೀಣಿಸಿದ್ದು, ಈ ಬಗ್ಗೆ ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ ಬಳಿಕ ಸ್ಪಷ್ಟ ಚಿತ್ರಣ ಹೊರಬೀಳಲಿದೆ. 

ಉತ್ತರ ಪ್ರದೇಶದ ಮಾದರಿಯಲ್ಲಿ ಜಾತಿ ಸಮೀಕರಣ ಆಧರಿಸಿ ಇಬ್ಬರು ಅಥವಾ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂಬ ಆಶಯ ಪಕ್ಷದ ವರಿಷ್ಠರಿಗಿದ್ದರೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಅದು ಗೊಂದಲ ಹುಟ್ಟು ಹಾಕಬಹುದು ಎಂಬ ಆತಂಕ ಕಾಣಿಸಿಕೊಂಡಿದೆ. ಕಳೆದ ಬಾರಿ ಉಪಮುಖ್ಯಮಂತ್ರಿ ಗಳಾಗಿದ್ದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಅವರೂ ಸಂಪುಟದಲ್ಲಿದ್ದಾರೆ. ಅವರನ್ನು ಈಗ ಡಿಸಿಎಂ ಆಗಿ ಮಾಡದಿದ್ದರೆ ಅದು ತಪ್ಪು ಸಂದೇಶ ರವಾನಿಸಬಹುದು. ಹಿಂದೆ ಮುಖ್ಯಮಂತ್ರಿ ಯಾಗಿದ್ದ ಜಗದೀಶ್ ಶೆಟ್ಟರ್ ಕೂಡ ಸಂಪುಟದಲ್ಲಿದ್ದಾರೆ. ಇತರರನ್ನು ಉಪಮುಖ್ಯಮಂತ್ರಿ ಗಳನ್ನಾಗಿ ಮಾಡಿ ಶೆಟ್ಟರ್ ಅವರನ್ನು ಕೇವಲ ಸಚಿವರನ್ನಾಗಿ ಉಳಿಸುವುದು  ಸರಿಯಾಗುವುದಿಲ್ಲ.

ಬಿ.ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಕೂಗು ಅವರ ವಾಲ್ಮೀಕಿ ಸಮುದಾಯದಿಂದ ಪ್ರಬಲವಾಗಿ ಕೇಳಿಬರುತ್ತಲೇ ಇದೆ. ಅನರ್ಹ ಶಾಸಕ ಹಾಗೂ ಮುಂದಿನ ದಿನಗಳಲ್ಲಿ ಸಂಪುಟ ಸೇರುವ ಸಾಧ್ಯತೆಯಿರುವ ರಮೇಶ್ ಜಾರಕಿಹೊಳಿ ಅವರೂ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿರಿಸಿದ್ದಾರೆ. ಇವರೆಲ್ಲರ ಜೊತೆಗೆ ಹಿರಿಯರಾದ ಗೋವಿಂದ ಕಾರಜೋಳ ಅವರನ್ನೂ ಪರಿಗಣಿಸಬೇಕಾಗುತ್ತದೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಒಟ್ಟು ಆರು ಮಂದಿ ಪ್ರಮುಖರು ಡಿಸಿಎಂ ರೇಸ್‌ನಲ್ಲಿ ಇದ್ದಂತಾಗಲಿದೆ. ಹೀಗಾಗಿ, ಈ ಪೈಕಿ ಒಂದಿಬ್ಬರನ್ನು ಮಾಡಿ ಇನ್ನುಳಿದವರನ್ನು ಬಿಟ್ಟರೆ ಅದು ಮತ್ತೊಂದು ರೀತಿಯ ಗೊಂದಲಕ್ಕೆ ಕಾರಣವಾಗುತ್ತದೆ ಎಂಬ ಆತಂಕ ಪಕ್ಷದ ನಾಯಕರಲ್ಲಿದೆ. ಹೀಗಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವುದೇ ಬೇಡ ಎಂಬ ನಿಲುವು ಪಕ್ಷದಲ್ಲಿ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

Follow Us:
Download App:
  • android
  • ios