20ಕ್ಕೂ ಹೆಚ್ಚು ಸೇನಾ ಶಿಬಿರಗಳ ಮೇಲೆ ಪಾಕಿಸ್ತಾನ ರೇಂಜರ್’ಗಳು ಗುಂಡಿನ ದಾಳಿ ನಡೆಸಿದೆ.  ಆರ್​​​​.ಎಸ್​.ಪುರ, ಅಖ್ನೂರ್​​​ ಸೆಕ್ಟರ್​ನಲ್ಲಿ ನಡೆದಿರುವ ಘಟನೆಯಲ್ಲಿ  ಬಿಎಸ್​ಎಫ್ ಯೋಧ ಸುಶೀಲ್ ಕುಮಾರ್ ಹುತಾತ್ಮರಾಗಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾ​ಕಿಸ್ತಾನ ಮತ್ತೆ ಗುಂಡಿನ ದಾಳಿ ನಡೆಸಿದೆ. ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎನ್ನಲಾಗಿದೆ.

20ಕ್ಕೂ ಹೆಚ್ಚು ಸೇನಾ ಶಿಬಿರಗಳ ಮೇಲೆ ಪಾಕಿಸ್ತಾನ ರೇಂಜರ್’ಗಳು ಗುಂಡಿನ ದಾಳಿ ನಡೆಸಿದೆ. ಆರ್​​​​.ಎಸ್​.ಪುರ, ಅಖ್ನೂರ್​​​ ಸೆಕ್ಟರ್​ನಲ್ಲಿ ನಡೆದಿರುವ ಘಟನೆಯಲ್ಲಿ ಬಿಎಸ್​ಎಫ್ ಯೋಧ ಸುಶೀಲ್ ಕುಮಾರ್ ಹುತಾತ್ಮರಾಗಿದ್ದಾರೆ.

ಮತ್ತೊಬ್ಬ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಳೆದ 5 ದಿನಗಳಲ್ಲಿ ಪಾಕಿಸ್ತಾನ 7ನೇ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನೆಯು ದಾಳಿಗೆ ತಕ್ಕ ಪ್ರತ್ತ್ಯುತ್ತರ ನೀಡಿದೆ.

(ಸಾಂದರ್ಭಿಕ ಚಿತ್ರ)