ಇನ್ಮುಂದೆ ಯಾವುದೇ ಒಡಕು ನಮ್ಮ ಮಧ್ಯೆ ಬರಲ್ಲ ಎಂದು ಸಭೆ ಬಳಿಕ ಬಿ.ಎಸ್​.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ಒಬಿಸಿ ಮೋರ್ಚಾದ ಹೊಣೆ ನೀಡಿದ್ದಕ್ಕೆ ಸಂತಸವಾಗಿದೆ.

ನವದೆಹಲಿ(ಜ.27): ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಎಸ್​ವೈ- ಈಶ್ವರಪ್ಪ ಒಂದುಗೂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ಹೊಣೆಯನ್ನು ಈಶ್ವರಪ್ಪ ಹೆಗಲಿಗೆ ವಹಿಸಲಾಗಿದೆ.

ನಾನು ಈಶ್ವರಪ್ಪನವರು ನಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ. ಈಶ್ವರಪ್ಪ ಜೊತೆಗೆ ಒಟ್ಟಾಗಿ ಕೆಲಸ ಮಾಡಲು ತಿಳಿಸಿದ್ದಾರೆ ಇನ್ಮುಂದೆ ಯಾವುದೇ ಒಡಕು ನಮ್ಮ ಮಧ್ಯೆ ಬರಲ್ಲ ಎಂದು ಸಭೆ ಬಳಿಕ ಬಿ.ಎಸ್​.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. 

ಬಿಜೆಪಿ ಒಬಿಸಿ ಮೋರ್ಚಾದ ಹೊಣೆ ನೀಡಿದ್ದಕ್ಕೆ ಸಂತಸವಾಗಿದೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಆಗಲಿದ್ದಾರೆ ಎಂದು ಸಭೆ ಬಳಿಕ ಕೆ.ಎಸ್​.ಈಶ್ವರಪ್ಪ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಗೊಳಿಸಲು ಬಿಜೆಪಿ ಸಿದ್ಧವಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್​ ಮುಕ್ತ ಮಾಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ರಾಯಣ್ಣ ಬ್ರಿಗೇಡ್​ ಸಭೆಯಲ್ಲಿ ಈಶ್ವರಪ್ಪ ಭಾಗವಹಿಸಲ್ಲ ಎಂದು ಸಂಧಾನ ಸಭೆಯ ನಂತರ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರರಾವ್​ ತಿಳಿಸಿದ್ದಾರೆ.