ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯಗೆ ಸವಾಲ್ ಎಸೆದಿರುವ ಬಿಎಸ್‌ವೈ ಆರೋಪ ಸಾಬೀತು ಪಡಿಸಿದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು(ಫೆ.13): ಸಿಎಂ ಸಿದ್ದರಾಮಯ್ಯಗೆ ಬಿ.ಎಸ್.ಯಡಿಯೂರಪ್ಪ ಮತ್ತೊಂದು ಸವಾಲ್ ಹಾಕಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೈಕಮಾಂಡ್‌'ಗೆ ಒಂದು ಸಾವಿರ ಕೋಟಿ ಹಣ ನೀಡಿದ್ದಾರೆ ಎಂದು ಬಿಎಸ್‌'ವೈ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಒಂದುವೇಳೆ ಈ ಆರೋಪ ಸಾಬೀತಾದರೆ ತಾವು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಪ್ರತಿ ಸವಾಲ್ ಎಸೆದಿದ್ದರು.

ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯಗೆ ಸವಾಲ್ ಎಸೆದಿರುವ ಬಿಎಸ್‌ವೈ ಆರೋಪ ಸಾಬೀತು ಪಡಿಸಿದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಗೋವಿಂದ ರಾಜ್ ಡೈರಿಯಲ್ಲಿ 65 ಕೋಟಿ ಅಂತ ಉಲ್ಲೇಖವಾಗಿರುವುದು ಸುಳ್ಳಾ? ಎಂದಿರುವ ಅವರು, ನನ್ನ ಬಗ್ಗೆ ನೀವು ಹಗುರವಾಗಿ ಮಾತನಾಡಬೇಡಿ. ಪ್ರಕರಣ ಸಾಬೀತಾದ್ರೆ ನೀವು ರಾಜೀನಾಮೆ ಕೊಡ್ತೀರ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲ್ ಎಸೆದಿದ್ದಾರೆ .