Asianet Suvarna News Asianet Suvarna News

ಬಿಎಸ್'ವೈ ದಲಿತರ ಮನೆಯಲ್ಲಿ ಊಟ ಮಾಡಿದ್ರು: ಆದರೆ ತಿಂಡಿ ಹೋಟೆಲ್'ನಿಂದ ತಂದಿದ್ದು

. ನಿನ್ನೆ ದಲಿತರ ಮನೆಯಲ್ಲಿ  ಹೊಟೇಲ್​ನಿಂದ ತರಿಸಿ ಯಡಿಯೂರಪ್ಪ ಟಿಫಿನ್ ಸೇವನೆ ಆರೋಪ ಗಂಭೀರ ಸ್ವರೂಪಕ್ಕೆ ತಿರುಗಿದೆ. ಆದರೆ, ಬಿಜೆಪಿ ಮುಖಂಡರು ಮಾತ್ರ ದಲಿತರ ಮನೆಯಲ್ಲೇ ಉಪಹಾರ ಮಾಡಲಾಗಿದೆ ಅಂತ ಹೇಳಿಕೊಂಡ್ರು.

BSY eat hotel Food at SC House

ಚಿತ್ರದುರ್ಗ(ಮೇ.19): ಬರ ಪ್ರವಾಸದ ಎರಡನೇ ದಿನ ಚಿತ್ರದುರ್ಗ ಜಿಲ್ಲೆ ಯ ಹಲವೆಡೆ ನಡೆಯಿತು. ಮೊದಲ ದಿನವಿದ್ದ ಆರ್ಭಟ ಎರಡನೇ ದಿನ ಇರ್ಲಿಲ್ಲ. ಆದ್ರೆ, ನಿನ್ನೆ ತುಮಕೂರಿನ ದಲಿತರ ಮನೆಯ ಭೋಜನ ಸಖತ್ ಸದ್ದು ಮಾಡಿದೆ. ಹೋಟೆಲ್​ನಿಂದ ತಂದಿದ್ದ ಇಡ್ಲಿಯನ್ನ ದಲಿತರ ಮನೆಯಲ್ಲಿ ಸೇವಿಸಿ ಕಮಲಪಡೆ ಮೋಸ ಮಾಡಿದೆ ಅನ್ನೋ ಆರೋಪ ಕೇಳಿ ಬಂದಿದೆ.

ತುಮಕೂರಿಲ್ಲಿ ನಿನ್ನೆ 30ಕ್ಕೂ ಹೆಚ್ಚು ಬಿಜೆಪಿ ನಾಯಕರ ದಂಡು ಇವತ್ತು ಚಿತ್ರದುರ್ಗದಲ್ಲಿ ಕೇವಲ ಮೂರ್ನಾಲ್ಕಕ್ಕೆ ಇಳಿದಿತ್ತು. ನಿನ್ನೆ ದಲಿತರ ಮನೆಯಲ್ಲಿ  ಹೊಟೇಲ್​ನಿಂದ ತರಿಸಿ ಯಡಿಯೂರಪ್ಪ ಟಿಫಿನ್ ಸೇವನೆ ಆರೋಪ ಗಂಭೀರ ಸ್ವರೂಪಕ್ಕೆ ತಿರುಗಿದೆ. ಆದರೆ, ಬಿಜೆಪಿ ಮುಖಂಡರು ಮಾತ್ರ ದಲಿತರ ಮನೆಯಲ್ಲೇ ಉಪಹಾರ ಮಾಡಲಾಗಿದೆ ಅಂತ ಹೇಳಿಕೊಂಡ್ರು.

ಮಾಗಡಿಯಲ್ಲಿ ಮಾತಾಡಿದ ಎಚ್​.ಡಿ.ಕುಮಾರಸ್ವಾಮಿ, ಬಿಜೆಪಿ ಮುಖಂಡರು ಇಂತಹ ಕೀಳು ಅಭಿರುಚಿ ಕೈಬಿಡಬೇಕು ಅಂತ ಮನವಿ ಮಾಡಿದರು. ಇತ್ತ ಕಾಂಗ್ರೆಸ್ ಪಕ್ಷದ SC-ST ಸೆಲ್​​ ಅಧ್ಯಕ್ಷ ಎಚ್ ಅಂಜಿನಪ್ಪ ಕೂಡಾ ದಲಿತರ ಮನೆಯಲ್ಲಿ ಹೋಟೆಲ್ ತಿಂಡಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಕಸರತ್ತು ಮಾಡಿದೆ. ಆದರೆ, ಬರ ಅಧ್ಯಯನ ಜನಸಂಪರ್ಕ ಹೆಸರಲ್ಲಿ ದಲಿತರ ಓಲೈಕೆಗೆ ಮುಂದಾಗಿ ಎಡವಟ್ಟು ಮಾಡಕೊಂಡಿದೆ.

Latest Videos
Follow Us:
Download App:
  • android
  • ios