ಅನಾಥ ಶಿಶುವನ್ನು ದೇವದೂತನಂತೆ ಬಂದು ಕಾಪಾಡಿದ ಪೊಲೀಸ್| ಚರಂಡಿಯಲ್ಲಿದ್ದ ಮಗುವನ್ನೆತ್ತಿ ಆಸ್ಪತ್ರೆಗೆ ಧಾವಿಸಿದ ಋಷಿಪಾಲ್| ಪೊಲೀಸ್ ಅಧಿಕಾರಿಯ ಮಾನವೀಯ ನಡೆಗೆ ಪ್ರಶಂಸೆಯ ಸುರಿಮಳೆ

ಲಕ್ನೋ[ಆ.27]: ಉತ್ತರ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಅನಾಥ ಶಿಶುವನ್ನು ಕಾಪಾಡಿ ಮಾನವೀಯತೆ ಮೆರೆದಿದ್ದಾರೆ. ಚರಂಡಿಗೆಸೆದಿದ್ದ ಮಗುವನ್ನು, ಕಾಪಾಡಿದ ಪೊಲೀಸ್ ಸಿಬ್ಬಂದಿಯ ಈ ಮಾನವೀಯ ನಡೆ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಬದಾಯೂನ್ ಪೊಲೀಸ್ ತಮ್ಮ ಟ್ವೀಟ್ ಖಾತೆಯಿಂದ ಟ್ವೀಟ್ ಒಂದನ್ನು ಮಾಡುತ್ತಾ ಅನಾಥ ನವಜಾತ ಶಿಶುವನ್ನು ಕಾಪಾಡಿದ ಪೊಲೀಸ್ ಸಿಬ್ಬಂದಿಯನ್ನು ಪ್ರಶಂಸಿಸಿದೆ. ಟ್ವೀಟ್ ಅನ್ವಯ ಈ ನವಜಾತ ಶಿಶುವನ್ನು ಯಾರೋ ಚರಂಡಿಗೆ ಎಸೆದು ಹೋಗಿದ್ದರು. ಆದರೆ ಈ ಮಾಹಿತಿ ಪಡೆದ ಖುಷಿಪಾಲ್ ಕೂಡಲೇ ಸ್ಥಳಕ್ಕೆ ಧಾವಿಸಿ, ಶಿಶುವನ್ನು ಆಸ್ಪತ್ರೆಗೊಯ್ದಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Scroll to load tweet…
Scroll to load tweet…
Scroll to load tweet…
Scroll to load tweet…

ಮಗುವನ್ನು ಕಾಪಾಡಿದ ಪೊಲೀಸ್ ಅಧಿಕಾರಿಗಳ ಕುರಿತು ಮಾಡಿರುವ ಟ್ವೀಟ್ ನಲ್ಲಿ 'ದೇವದೂತರಂತೆ ಬಂದ #budaunpolice, @up100 ನಲ್ಲಿ ಸೇವೆ ಸಲ್ಲಿಸುತ್ತಿರುವ ಖುಷಿಪಾಲ್, ಚರಂಡಿಯಲ್ಲಿ ಅನಾಥ ಶಿಶುವಿದೆ ಎಂಬ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ದನ್ನೆತ್ತಿ ಆಸ್ಪತ್ರೆಗೊಯ್ದಿದ್ದಾರೆ. ಸದ್ಯ ಮಗು ಅಪಾಯದಿಂದ ಪಾರಾಗಿದೆ' ಎಂದಿದೆ.