ಈಜಿಪುರದಲ್ಲಿ 3 ದಿನಗಳ ಹಿಂದೆ ಸಿಲಿಂಡರ್ ಸ್ಫೋಟಗೊಂಡು 3 ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ಮೃತಪಟ್ಟಿದ್ದರು. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುವಾಗ ಕಟ್ಟಡದ ಅವಶೇಷಗಳಡಿ ಮಗು ಸಿಲುಕಿತ್ತು.

ಬೆಂಗಳೂರು(ಅ.19): ಈಜೀಪುರದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ 3 ವರ್ಷದ ಮಗು ಸಂಜನಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.

Add Asianetnews Kannada as a Preferred SourcegooglePreferred

ಈಜಿಪುರದಲ್ಲಿ 3 ದಿನಗಳ ಹಿಂದೆ ಸಿಲಿಂಡರ್ ಸ್ಫೋಟಗೊಂಡು 3 ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ಮೃತಪಟ್ಟಿದ್ದರು. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುವಾಗ ಕಟ್ಟಡದ ಅವಶೇಷಗಳಡಿ ಮಗು ಸಿಲುಕಿತ್ತು. ದೇಹದ ಶೇ. 60ರಷ್ಟು ಭಾಗ ಸುಟ್ಟಿದ್ದರು ಜೀವ ಉಳಿದಿತ್ತು. ತೀವ್ರ ಗಾಯಗೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತೀರ್ವ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.