ನಂಜನಗೂಡು ಹಾಗು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ನಾಳೆ ಎರಡೂ ಕ್ಷೇತ್ರಗಳಲ್ಲೂ ಎರಡೂ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.

ಮೈಸೂರು (ಮಾ.19): ಸರ್ಕಾರ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯು ನಿಧಾನವಾಗಿ ಕಾವು ಪಡೆದುಕೊಂಡಿದೆ.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ನಾಳೆ ಎರಡೂ ಕ್ಷೇತ್ರಗಳಲ್ಲೂ ಎರಡೂ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.

ಈ ಮೂಲಕ ಅಧಿಕೃತವಾಗಿ ಎರಡೂ ಪಕ್ಷಗಳು ಮತಬೇಟೆಗೆ ಬೀದಿಗೆ ಇಳಿಯಲಿವೆ. ಮೀಸಲು ಕ್ಷೇತ್ರ ನಂಜನಗೂಡಿನ ಕಾಂಗ್ರೆಸ್​ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಬೆಳಿಗ್ಗೆ 10.30 ರ ಸುಮಾರಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್​ ಪ್ರಸಾದ್​ 11.30ಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಅದೇ ರೀತಿ ಸಾಮಾನ್ಯ ಕ್ಷೇತ್ರ ಗುಂಡ್ಲುಪೇಟೆಯಲ್ಲಿ ಕೂಡ ಬಿಜೆಪಿಯ ನಿರಂಜನ್ ​ಕುಮಾರ್​ ಹಾಗೂ ಕಾಂಗ್ರೆಸ್​'ನಿಂದ ದಿವಂಗತ ಡಾ.ಹೆಚ್​.ಎಸ್​.ಮಹದೇವ್​ ಪ್ರಸಾದ್​ ಪತ್ನಿ ಗೀತಾ ಪ್ರಸಾದ್​ ನಾಮಪತ್ರ ಸಲ್ಲಿಸಲಿದ್ದಾರೆ.