ಪೊಲೀಸರ ಸಮಯ ಪ್ರಜ್ಞೆ ಯಿಂದ ತಪ್ಪಿತು ಭಾರೀ ಅನಾಹುತ
ಪೊಲೀಸರ ಸಮಯ ಪ್ರಜ್ಞೆ ಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕೂದಲೆಳೆ ಅಂತರದಿಂದ ಆರು ಮಂದಿ ಪೇದೆಗಳು ಪಾರಾಗಿದ್ದಾರೆ. ನಿನ್ನೆ ರಾತ್ರಿ 10:50 ರ ಸುಮಾರಿಗೆ ಎಲಿವೇಟೆಡ್ ರಸ್ತೆ ಸಂಚಾರ ನಿರ್ಬಂಧಿಸಿ ಟ್ರಾಫಿಕ್ ನಿಯಂತ್ರಣ ವೇಳೆ ಈ ಘಟನೆ ನಡೆದಿದೆ.
ಬೆಂಗಳೂರು (ಜೂ. 06): ಪೊಲೀಸರ ಸಮಯ ಪ್ರಜ್ಞೆ ಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕೂದಲೆಳೆ ಅಂತರದಿಂದ ಆರು ಮಂದಿ ಪೇದೆಗಳು ಪಾರಾಗಿದ್ದಾರೆ. ನಿನ್ನೆ ರಾತ್ರಿ 10:50 ರ ಸುಮಾರಿಗೆ ಎಲಿವೇಟೆಡ್ ರಸ್ತೆ ಸಂಚಾರ ನಿರ್ಬಂಧಿಸಿ ಟ್ರಾಫಿಕ್ ನಿಯಂತ್ರಣ ವೇಳೆ ಈ ಘಟನೆ ನಡೆದಿದೆ.
ವೇಗವಾಗಿ ಬಂದ ಕ್ಯಾಬ್, ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಬ್ಯಾರಿಕೇಡ್ ಡಿಕ್ಕಿ ಹೊಡೆದಿದೆ. ಬ್ಯಾರಿಕೇಡ್ ಮುಂಭಾಗ ನಿಂತಿದ್ದ ಪೊಲೀಸರು ಪಕ್ಕಕ್ಕೆ ಜಿಗಿದು ಪಾರಾಗಿದ್ದಾರೆ. ಯಲಹಂಕ ಎರ್ ಫೋರ್ಸ್ ಮುಂಭಾಗ ಟ್ರಾಫಿಕ್ ನಿಯಂತ್ರಿಸುವಾಗ ಈ ಘಟನೆ ನಡೆದಿದೆ. ಪೇದೆಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.