ಮೇಕೆದಾಟು ಯೋಜನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ
ಮೇಕೆದಾಟು ಯೋಜನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ.
ಬೆಂಗಳೂರು (ಫೆ. 15): ಮೇಕೆದಾಟು ಯೋಜನೆಗೆ ಸಚಿವ ಸಂಪುಟ ಇಂದು ತಾತ್ವಿಕ ಒಪ್ಪಿಗೆ ನೀಡಿದೆ.
400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ, 60 ಟಿಎಂಸಿ ನೀರು ಸಂಗ್ರಹ ಮಾಡುವುದು ಮೇಕೆದಾಟು ಯೋಜನೆಯ ಗುರಿಯಾಗಿದೆ. ತಮಿಳುನಾಡಿಗೆ ಬಿಡಬೇಕಾದ ನೀರು ಬಿಡುತ್ತೇವೆ. ಹೆಚ್ಚುವರಿ ಹರಿದು ಹೋಗುವ ನೀರು ಶೇಖರಣೆಗೆ ಇಂದು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದೇವೆ. ಕೇಂದ್ರ ಜಲ ಆಯೋಗಕ್ಕೆ ಈ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಸಂಪುಟ ಸಭೆ ಬಳಿಕ ಸಚಿವ ಜಯಚಂದ್ರ ಹೇಳಿದ್ದಾರೆ.