ಇತರೆ ಹಿಂದುಳಿದ ವರ್ಗದಲ್ಲಿನ ಕೆನೆಪದರದವರಿಗೆ ಈಗಾಗಲೇ ಉದ್ಯೋಗ ಬಡ್ತಿಯಲ್ಲಿ ಮೀಸಲು ನಿರಾಕರಿಸಲಾಗಿದೆ. ಹೀಗಿರುವಾಗ ಈ ನಿಯಮವನ್ನು ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಕೆನೆಪದರಕ್ಕೆ ಏಕೆ ವಿಸ್ತರಿಸಿಲ್ಲ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. 

ನವದೆಹಲಿ: ಉನ್ನತ ಸರ್ಕಾರಿ ಹುದ್ದೆಗಳಲ್ಲಿ ಇರುವ ಪರಿಶಿಷ್ಟಜಾತಿ ಮತ್ತು ಪಂಗಡಗದ ಅಧಿಕಾರಿಗಳ ಮಕ್ಕಳು ಮತ್ತು ಸಂಬಂಧಿಕರಿಗೆ ಉದ್ಯೋಗ ಬಡ್ತಿಯಲ್ಲಿ ಮೀಸಲು ನೀಡುವ ಕ್ರಮವನ್ನು ಸುಪ್ರೀಂಕೋರ್ಟ್‌ ಪ್ರಶ್ನಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇತರೆ ಹಿಂದುಳಿದ ವರ್ಗದಲ್ಲಿನ ಕೆನೆಪದರದವರಿಗೆ ಈಗಾಗಲೇ ಉದ್ಯೋಗ ಬಡ್ತಿಯಲ್ಲಿ ಮೀಸಲು ನಿರಾಕರಿಸಲಾಗಿದೆ. ಹೀಗಿರುವಾಗ ಈ ನಿಯಮವನ್ನು ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಕೆನೆಪದರಕ್ಕೆ ಏಕೆ ವಿಸ್ತರಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರನ್ನು ಒಳಗೊಂಡ ಸಂವಿಧಾನ ಪೀಠ ಪ್ರಶ್ನಿಸಿದೆ. 

ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಉದ್ಯೋಗ ಬಡ್ತಿ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಪೀಠ ಈ ಪ್ರಶ್ನೆ ಎತ್ತಿದೆ. ಆದರೆ ಸುಪ್ರೀಂನ ಈ ವಾದ ತಳ್ಳಿಹಾಕಿದ ಕೇಂದ್ರ ಸರ್ಕಾರದ ಪರ ವಕೀಲರ ತಂಡ, ಕೆನೆಪದರದವರಿಗೂ ಬಡ್ತಿ ಮೀಸಲು ನೀಡುವುದನ್ನು ಬಲವಾಗಿ ಸಮರ್ಥಿಸಿಕೊಂಡಿತು.