ಸಚಿವ ಮಹದೇವಪ್ಪ, ಶಾಸಕ ಸೋಮಶೇಖರ್ ಕಾರು ನಡುವೆ ಡಿಕ್ಕಿ
ಸಚಿವ ಮಹದೇವಪ್ಪ ಹಾಗೂ ಶಾಸಕ ಸೋಮಶೇಖರ್ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.
ಮೈಸೂರು (ಸೆ.21): ಸಚಿವ ಮಹದೇವಪ್ಪ ಹಾಗೂ ಶಾಸಕ ಸೋಮಶೇಖರ್ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಸಿರಮಳ್ಳಿ ಬಳಿ ಈ ಘಟನೆ ನಡೆದಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಸ್ತೆ ದುರಸ್ಥಿಗೊಂಡಿದ್ದು, ಹಳ್ಳ ಕೊಳ್ಳಗಳು ಹೆಚ್ಚಿದ್ದರಿಂದ, ಗುಂಡಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಕಾರುಗಳ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮೂರು ಕಾರುಗಳು ಜಖಂಗೊಂಡಿವೆ.