ತಿರುನೆಲ್ವೇಲಿ ಕಲೆಕ್ಟರ್ ಕಚೇರಿ ಆವರಣದಲ್ಲಿ ಕೂಲಿಕಾರ ಕುಟುಂಬವೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರುದ್ಧ ವ್ಯಂಗ್ಯಚಿತ್ರ ಬರೆದು ಬಂಧನಕ್ಕೊಳಗಾಗಿದ್ದ ವ್ಯಂಗ್ಯಚಿತ್ರಕಾರ ಜಿ. ಬಾಲ ಅವರಿಗೆ ಜಾಮೀನು ದೊರೆತಿದೆ.

ತಿರುನೆಲ್ವೇಲಿ: ತಿರುನೆಲ್ವೇಲಿ ಕಲೆಕ್ಟರ್ ಕಚೇರಿ ಆವರಣದಲ್ಲಿ ಕೂಲಿಕಾರ ಕುಟುಂಬವೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರುದ್ಧ ವ್ಯಂಗ್ಯಚಿತ್ರ ಬರೆದು ಬಂಧನಕ್ಕೊಳಗಾಗಿದ್ದ ವ್ಯಂಗ್ಯಚಿತ್ರಕಾರ ಜಿ. ಬಾಲ ಅವರಿಗೆ ಜಾಮೀನು ದೊರೆತಿದೆ.

Add Asianetnews Kannada as a Preferred SourcegooglePreferred

ಜಾಮೀನಿನ ಮೇಲೆ ಬಿಡುಗಡೆ ಹೊಂದಿದ ಬಾಲ, ತಾನು ಸರ್ಕಾರವನ್ನು ಟೀಕಿಸುವುದನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.

ಕಾರ್ಟೂನ್ ಮೂಲಕ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಜಿ.ಬಾಲ ಅವರನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಬಾಲ ಅವರು ಈ ವ್ಯಂಗ್ಯಚಿತ್ರವನ್ನು ತಮ್ಮ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದರು. ತಮಿಳುನಾಡಿನಾದ್ಯಂತ ಅತೀವ ಜನಪ್ರಿಯರಾಗಿರುವ ಬಾಲು ಅವರ ಈ ಕಾರ್ಟೂನು 40 ಸಾವಿರಕ್ಕೂ ಹೆಚ್ಚು ಶೇರ್ ಆಗಿತ್ತು.

ಈ ವ್ಯಂಗ್ಯಚಿತ್ರದಲ್ಲಿ ಸುಟ್ಟುಹೋಗುತ್ತಿರುವ ಮಗುವನ್ನು ರಕ್ಷಿಸದೇ ಪೊಲೀಸ್ ಕಮಿಷನರ್, ನೆಲ್ಲೈ ಕಲೆಕ್ಟರ್ ಮತ್ತು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಹಣದ ಕಂತೆ ಮೂಲಕ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿರುವಂತೆ ಬಿಂಬಿಸಲಾಗಿದೆ.