50 ಕೋಟಿ ರು.ಗಿಂತ ಹೆಚ್ಚಿನ ಮೊತ್ತದ ಎಲ್ಲಾ ಸುಸ್ತಿ ಸಾಲಗಳನ್ನು ಸಂಭವನೀಯ ವಂಚನೆ ಪ್ರಕರಣ ಎಂದು ಪರಿಗಣಿಸಿ, ಅಂಥ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಸೂಚಿಸಿದೆ.

ನವದೆಹಲಿ: 50 ಕೋಟಿ ರು.ಗಿಂತ ಹೆಚ್ಚಿನ ಮೊತ್ತದ ಎಲ್ಲಾ ಸುಸ್ತಿ ಸಾಲಗಳನ್ನು ಸಂಭವನೀಯ ವಂಚನೆ ಪ್ರಕರಣ ಎಂದು ಪರಿಗಣಿಸಿ, ಅಂಥ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಸೂಚಿಸಿದೆ.

Add Asianetnews Kannada as a Preferred SourcegooglePreferred

ಪಿಎನ್‌ಬಿ ವಂಚನೆ ಸೇರಿದಂತೆ ಹಲವು ಬ್ಯಾಂಕ್‌ ವಂಚನೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಸಚಿವಾಲಯ ಈ ನಿರ್ಧಾರಕ್ಕೆ ಬಂದಿದೆ.

ಪಿಎಸ್‌ಬಿಗಳು ಕೇಂದ್ರೀಯ ತನಿಖಾ ಸಂಸ್ಥೆಗಳೊಂದಿಗೆ ಇಂತಹ ವಂಚನೆಗಳ ತನಿಖೆಗೆ ಕೈಜೋಡಿಸುವಂತೆಯೂ ಕೋರಲಾಗಿದೆ. ಎಲ್ಲ ಪಿಎಸ್‌ಬಿಗಳಲ್ಲಿ ಸುಮಾರು 8.5 ಲಕ್ಷ ಕೋಟಿ ರು. ಮೌಲ್ಯದ ಅನುತ್ಪಾದಕ ಆಸ್ತಿ ಖಾತೆಗಳು ಘೋಷಣೆಯಾಗಿವೆ.