ಬೆಂಗಳೂರು (ಸೆ.12): ಕಾವೇರಿ ನದಿ ನೀರು ಹಂಚಿಕೆ ಸಂಬಂಧಪಟ್ಟಂತೆ ಸುಪ್ರೀಂಕೊರ್ಟ್ ಆದೇಶದ ವಿರುದ್ಧ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಸುದ್ದಿಗೋಷ್ಠಿನಡೆಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಪ್ರತಿಭಟನಾಕಾರರು ಬಸ್​ ಲಾರಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡಿನ 27 ವಾಹನಗಳಿಗೆ ಹಾನಿ ಮತ್ತು ಬೆಂಕಿ ಹಚ್ಚಲಾಗಿದೆ. ತಮಿಳುನಾಡಿನಲ್ಲಿ ಕರ್ನಾಟಕದ ವಾಹನಗಳಿಗೂ ಹಾನಿ ಮಾಡಲಾಗಿದೆ.

ಮುಂಜಾಗ್ರತ ಕ್ರಮವಾಗಿ ಬೆಂಗಳೂರು ನಗರದಲ್ಲಿ 144 ಸೆಕ್ಷನ್​ ಜಾರಿಗೊಳಿಸುವಂತೆ ನಗರ ಪೊಲೀಸ್ ಆಯುಕ್ತ ಮೇಘರೀಕ್ ಆದೇಶಿಸಿದ್ದಾರೆ.

ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತಿಭಟನೆಯಾಗಿದೆ.