ಏನಿದು ಪ್ರಕರಣ? ಐತೀರ್ಪಿನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೆಷ್ಟು
ಕರ್ನಾಟಕಕ್ಕೆ 270 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪಾಂಡಿಚೇರಿಗೆ 7ಟಿಎಂಸಿ ಹಂಚಿತ್ತು
ಕಾವೇರಿ ನದಿ ವಿವಾದ ಇತ್ಯರ್ಥಕ್ಕೆ ಸಂಬಂಧಿಸಿ ರಚಿಸಲಾಗಿದ್ದ ಕಾವೇರಿ ನದಿ ನ್ಯಾಯಾಧಿಕರಣ 2007ರಲ್ಲಿ ಪ್ರಕಟಿಸಿದ ಐತೀರ್ಪಿನಲ್ಲಿ ತಮಿಳುನಾಡಿಗೆ 419 ಟಿಎಂಸಿ, ಕರ್ನಾಟಕಕ್ಕೆ 270 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪಾಂಡಿಚೇರಿಗೆ 7ಟಿಎಂಸಿ ಹಾಗೂ ಉಳಿದಂತೆ 14 ಟಿಎಂಸಿ ಯನ್ನು ಪರಿಸರ ಬಳಕೆ, ಆವಿಯಾಗುವಿಕೆ ಮುಂತಾದವುಗಳಿಗೆ ಹಂಚಿತ್ತು. ಇದನ್ನು ಪ್ರಶ್ನಿಸಿ ನಾಲ್ಕೂ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದವು.