ಬೆಂಗಳೂರು (ಸೆ.12): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಪಟ್ಟಂತೆ ತಮಿಳುನಾಡಿನಲ್ಲೂ ಹೋರಾಟ ತೀವ್ರಗೊಳ್ಳುತ್ತಿದೆ.
ತಮಿಳುನಾಡಿನ ವಿವಿಧೆಡೆ ಪ್ರತಿಭಟನೆ ನಡೆಯುತ್ತಿದ್ದು, ಚೆನ್ನೈನಲ್ಲಿ ಕನ್ನಡಿಗರಿಗೆ ಸೇರಿದ ವುಡ್ಲ್ಯಾಂಡ್ ಹೋಟೆಲ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಹಾಗೂ ಕಲ್ಲು ತೂರಾಟ ನಡೆಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿದ್ದಾರೆ. ಅಲ್ಲದೇ ರಾಮನಾಥಪುರಂನಲ್ಲಿ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ನಾಗಪಟ್ಟಣಂ, ತಿರುಚ್ಚಿ, ತಾಂಜಾವೂರಿನಲ್ಲೂ ಕರ್ನಾಟಕ ನೋಂದಣಿಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಾಥಪುರಂನಲ್ಲಿ ಬೈಕ್ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪಟ್ಟಣಂ, ತಿರುಚ್ಚಿ, ತಾಂಜಾವೂರಿನಲ್ಲೂ ಕಲ್ಲು ತೂರಾಟ ನಡೆದಿದೆ.
